ಕೋಲಿಗೆರೆಯ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ನೂತನವಾಗಿ ನಿರ್ಮಾಣ ಮಾಡಲಾದ ಮೊದಲನೆಯ ಮಹಡಿ ಕಟ್ಟಡ ಹಾಗೂ ತರಬನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿ ಸಂಘದಡಿ ಬಮೂಲ್ ವತಿಯಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಮಹಿಳೆಯರು ಅತ್ಯಂತ ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡಿದ್ದಾರೆ. ಇದಕ್ಕೆ ಹೈನುಗಾರಿಕೆಯೇ ಸಾಕ್ಷಿ ಎಂದರು.
ತರಬನಹಳ್ಳಿಯಲ್ಲಿ ಮಹಿಳಾ ಎಂಪಿಸಿಎಸ್ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಇತರೆ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಮಹಿಳೆಯರು ಯಾವುದೇ ಅಂಜಿಕೆ, ಅಳುಕಿಲ್ಲದೆ ಜೀವನ ಮಾಡುವಂತ ಸಮಾಜ ನಿರ್ಮಾಣವಾಗಬೇಕಿದೆ. ಹೈನುಗಾರಿಕೆ ನಂಬಿದ ರೈತರು ಶ್ರದ್ಧೆಯಿಂದ ಮಾಡಿದರೆ ಎಂದಿಗೂ ನಷ್ಟಕ್ಕೀಡಾಗುವುದಿಲ್ಲ ಎಂದರು.
ಕೋಲಿಗೆರೆ ಹಾಲು ಉತ್ಪಾದಕ ಸಹಕಾರಿ ಸಂಘದ ಮೊದಲನೇ ಮಹಡಿಗೆ ಬಮೂಲ್ ನಿಂದ ತಡಮಾಡದೆ ಅನುದಾನ ನೀಡಲಾಗಿದೆ. ಹಾಲು ಉತ್ಪಾದಕ ಸಂಘಗಳ ಬೆಳವಣಿಗೆಗಳು ಪರೋಕ್ಷವಾಗಿ ರೈತರನ್ನು ಅಭಿವೃದ್ಧಿಯ ಸಂಕೇತವಾಗಿರಲಿವೆ. ಇದು ಸಾಧ್ಯವಾಗಬೇಕಾದರೆ ರೈತರು ಎಂಪಿಸಿಎಸ್ ಗಳಲ್ಲಿ ಯಾವುದೇ ರಾಜಕೀಯ ಮಾಡದೆ ಮುನ್ನಡೆಯಬೇಕು ಎಂದು ತಿಳಿಸಿದರು.
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…