ಕೋಲಿಗೆರೆಯ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ನೂತನವಾಗಿ ನಿರ್ಮಾಣ ಮಾಡಲಾದ ಮೊದಲನೆಯ ಮಹಡಿ ಕಟ್ಟಡ ಹಾಗೂ ತರಬನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿ ಸಂಘದಡಿ ಬಮೂಲ್ ವತಿಯಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಮಹಿಳೆಯರು ಅತ್ಯಂತ ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡಿದ್ದಾರೆ. ಇದಕ್ಕೆ ಹೈನುಗಾರಿಕೆಯೇ ಸಾಕ್ಷಿ ಎಂದರು.
ತರಬನಹಳ್ಳಿಯಲ್ಲಿ ಮಹಿಳಾ ಎಂಪಿಸಿಎಸ್ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಇತರೆ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಮಹಿಳೆಯರು ಯಾವುದೇ ಅಂಜಿಕೆ, ಅಳುಕಿಲ್ಲದೆ ಜೀವನ ಮಾಡುವಂತ ಸಮಾಜ ನಿರ್ಮಾಣವಾಗಬೇಕಿದೆ. ಹೈನುಗಾರಿಕೆ ನಂಬಿದ ರೈತರು ಶ್ರದ್ಧೆಯಿಂದ ಮಾಡಿದರೆ ಎಂದಿಗೂ ನಷ್ಟಕ್ಕೀಡಾಗುವುದಿಲ್ಲ ಎಂದರು.
ಕೋಲಿಗೆರೆ ಹಾಲು ಉತ್ಪಾದಕ ಸಹಕಾರಿ ಸಂಘದ ಮೊದಲನೇ ಮಹಡಿಗೆ ಬಮೂಲ್ ನಿಂದ ತಡಮಾಡದೆ ಅನುದಾನ ನೀಡಲಾಗಿದೆ. ಹಾಲು ಉತ್ಪಾದಕ ಸಂಘಗಳ ಬೆಳವಣಿಗೆಗಳು ಪರೋಕ್ಷವಾಗಿ ರೈತರನ್ನು ಅಭಿವೃದ್ಧಿಯ ಸಂಕೇತವಾಗಿರಲಿವೆ. ಇದು ಸಾಧ್ಯವಾಗಬೇಕಾದರೆ ರೈತರು ಎಂಪಿಸಿಎಸ್ ಗಳಲ್ಲಿ ಯಾವುದೇ ರಾಜಕೀಯ ಮಾಡದೆ ಮುನ್ನಡೆಯಬೇಕು ಎಂದು ತಿಳಿಸಿದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…