ಕೋಲಿಗೆರೆಯ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ನೂತನವಾಗಿ ನಿರ್ಮಾಣ ಮಾಡಲಾದ ಮೊದಲನೆಯ ಮಹಡಿ ಕಟ್ಟಡ ಹಾಗೂ ತರಬನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿ ಸಂಘದಡಿ ಬಮೂಲ್ ವತಿಯಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಮಹಿಳೆಯರು ಅತ್ಯಂತ ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡಿದ್ದಾರೆ. ಇದಕ್ಕೆ ಹೈನುಗಾರಿಕೆಯೇ ಸಾಕ್ಷಿ ಎಂದರು.
ತರಬನಹಳ್ಳಿಯಲ್ಲಿ ಮಹಿಳಾ ಎಂಪಿಸಿಎಸ್ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಇತರೆ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಮಹಿಳೆಯರು ಯಾವುದೇ ಅಂಜಿಕೆ, ಅಳುಕಿಲ್ಲದೆ ಜೀವನ ಮಾಡುವಂತ ಸಮಾಜ ನಿರ್ಮಾಣವಾಗಬೇಕಿದೆ. ಹೈನುಗಾರಿಕೆ ನಂಬಿದ ರೈತರು ಶ್ರದ್ಧೆಯಿಂದ ಮಾಡಿದರೆ ಎಂದಿಗೂ ನಷ್ಟಕ್ಕೀಡಾಗುವುದಿಲ್ಲ ಎಂದರು.
ಕೋಲಿಗೆರೆ ಹಾಲು ಉತ್ಪಾದಕ ಸಹಕಾರಿ ಸಂಘದ ಮೊದಲನೇ ಮಹಡಿಗೆ ಬಮೂಲ್ ನಿಂದ ತಡಮಾಡದೆ ಅನುದಾನ ನೀಡಲಾಗಿದೆ. ಹಾಲು ಉತ್ಪಾದಕ ಸಂಘಗಳ ಬೆಳವಣಿಗೆಗಳು ಪರೋಕ್ಷವಾಗಿ ರೈತರನ್ನು ಅಭಿವೃದ್ಧಿಯ ಸಂಕೇತವಾಗಿರಲಿವೆ. ಇದು ಸಾಧ್ಯವಾಗಬೇಕಾದರೆ ರೈತರು ಎಂಪಿಸಿಎಸ್ ಗಳಲ್ಲಿ ಯಾವುದೇ ರಾಜಕೀಯ ಮಾಡದೆ ಮುನ್ನಡೆಯಬೇಕು ಎಂದು ತಿಳಿಸಿದರು.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…