ಕೋಲಿಗೆರೆಯ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ನೂತನವಾಗಿ ನಿರ್ಮಾಣ ಮಾಡಲಾದ ಮೊದಲನೆಯ ಮಹಡಿ ಕಟ್ಟಡ ಹಾಗೂ ತರಬನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿ ಸಂಘದಡಿ ಬಮೂಲ್ ವತಿಯಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಮಹಿಳೆಯರು ಅತ್ಯಂತ ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡಿದ್ದಾರೆ. ಇದಕ್ಕೆ ಹೈನುಗಾರಿಕೆಯೇ ಸಾಕ್ಷಿ ಎಂದರು.
ತರಬನಹಳ್ಳಿಯಲ್ಲಿ ಮಹಿಳಾ ಎಂಪಿಸಿಎಸ್ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಇತರೆ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಮಹಿಳೆಯರು ಯಾವುದೇ ಅಂಜಿಕೆ, ಅಳುಕಿಲ್ಲದೆ ಜೀವನ ಮಾಡುವಂತ ಸಮಾಜ ನಿರ್ಮಾಣವಾಗಬೇಕಿದೆ. ಹೈನುಗಾರಿಕೆ ನಂಬಿದ ರೈತರು ಶ್ರದ್ಧೆಯಿಂದ ಮಾಡಿದರೆ ಎಂದಿಗೂ ನಷ್ಟಕ್ಕೀಡಾಗುವುದಿಲ್ಲ ಎಂದರು.
ಕೋಲಿಗೆರೆ ಹಾಲು ಉತ್ಪಾದಕ ಸಹಕಾರಿ ಸಂಘದ ಮೊದಲನೇ ಮಹಡಿಗೆ ಬಮೂಲ್ ನಿಂದ ತಡಮಾಡದೆ ಅನುದಾನ ನೀಡಲಾಗಿದೆ. ಹಾಲು ಉತ್ಪಾದಕ ಸಂಘಗಳ ಬೆಳವಣಿಗೆಗಳು ಪರೋಕ್ಷವಾಗಿ ರೈತರನ್ನು ಅಭಿವೃದ್ಧಿಯ ಸಂಕೇತವಾಗಿರಲಿವೆ. ಇದು ಸಾಧ್ಯವಾಗಬೇಕಾದರೆ ರೈತರು ಎಂಪಿಸಿಎಸ್ ಗಳಲ್ಲಿ ಯಾವುದೇ ರಾಜಕೀಯ ಮಾಡದೆ ಮುನ್ನಡೆಯಬೇಕು ಎಂದು ತಿಳಿಸಿದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…