ಕೋಲಿಗೆರೆಯ ಹಾಲು ಉತ್ಪಾದಕ ಸಹಕಾರಿ ಸಂಘದ ಕಟ್ಟಡದ ನೂತನವಾಗಿ ನಿರ್ಮಾಣ ಮಾಡಲಾದ ಮೊದಲನೆಯ ಮಹಡಿ ಕಟ್ಟಡ ಹಾಗೂ ತರಬನಹಳ್ಳಿಯಲ್ಲಿ ಮಹಿಳಾ ಹಾಲು ಉತ್ಪಾದಕ ಸಹಕಾರಿ ಸಂಘದಡಿ ಬಮೂಲ್ ವತಿಯಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆಎಂಎಫ್ ಮತ್ತು ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಮಹಿಳೆಯರು ಅತ್ಯಂತ ಸ್ವಾಭಿಮಾನದಿಂದ ಜೀವನ ರೂಪಿಸಿಕೊಂಡಿದ್ದಾರೆ. ಇದಕ್ಕೆ ಹೈನುಗಾರಿಕೆಯೇ ಸಾಕ್ಷಿ ಎಂದರು.
ತರಬನಹಳ್ಳಿಯಲ್ಲಿ ಮಹಿಳಾ ಎಂಪಿಸಿಎಸ್ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ಇತರೆ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ. ಮಹಿಳೆಯರು ಯಾವುದೇ ಅಂಜಿಕೆ, ಅಳುಕಿಲ್ಲದೆ ಜೀವನ ಮಾಡುವಂತ ಸಮಾಜ ನಿರ್ಮಾಣವಾಗಬೇಕಿದೆ. ಹೈನುಗಾರಿಕೆ ನಂಬಿದ ರೈತರು ಶ್ರದ್ಧೆಯಿಂದ ಮಾಡಿದರೆ ಎಂದಿಗೂ ನಷ್ಟಕ್ಕೀಡಾಗುವುದಿಲ್ಲ ಎಂದರು.
ಕೋಲಿಗೆರೆ ಹಾಲು ಉತ್ಪಾದಕ ಸಹಕಾರಿ ಸಂಘದ ಮೊದಲನೇ ಮಹಡಿಗೆ ಬಮೂಲ್ ನಿಂದ ತಡಮಾಡದೆ ಅನುದಾನ ನೀಡಲಾಗಿದೆ. ಹಾಲು ಉತ್ಪಾದಕ ಸಂಘಗಳ ಬೆಳವಣಿಗೆಗಳು ಪರೋಕ್ಷವಾಗಿ ರೈತರನ್ನು ಅಭಿವೃದ್ಧಿಯ ಸಂಕೇತವಾಗಿರಲಿವೆ. ಇದು ಸಾಧ್ಯವಾಗಬೇಕಾದರೆ ರೈತರು ಎಂಪಿಸಿಎಸ್ ಗಳಲ್ಲಿ ಯಾವುದೇ ರಾಜಕೀಯ ಮಾಡದೆ ಮುನ್ನಡೆಯಬೇಕು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…