ಬೆಂಗಳೂರಿನ ಹೆಬ್ಬಗೋಡಿ ಬಳಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಕೇರಳ ಮೂಲದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕದ್ದ ಉಡುಪುಗಳನ್ನು ಧರಿಸುತ್ತಿದ್ದನು ಮತ್ತು ಆತನ ಮನೆಯಲ್ಲಿ ಹಾಗೂ ಮೊಬೈಲ್ನಲ್ಲಿ ಮಹಿಳೆಯರ ಒಳ ಉಡುಪುಗಳು ಪತ್ತೆಯಾಗಿವೆ.
ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ.
ಬಂಧಿತನನ್ನು ಕೇರಳ ಮೂಲದ 23ರ ಹರೆಯದ ಅಮಲ್ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಅಮಲ್ ಮಹಿಳೆಯರ ಒಳಉಡುಪುಗಳನ್ನು ಕಳ್ಳತನ ಮಾಡುತ್ತಿದ್ದನು. ಕದ್ದ ಉಡುಪುಗಳನ್ನು ಅಮಲ್ ಧರಿಸಿಕೊಳ್ಳುತ್ತಿದ್ದನು ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿಯನ್ನಾಧರಿಸಿ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧನದ ಬಳಿಕ ಆರೋಪಿಯ ಮೊಬೈಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್ನಲ್ಲಿ ಮಹಿಳೆಯರ ಒಳುಉಡುಪುಗಳು ಫೋಟೋಗಳಿರೋದನ್ನು ಕಂಡು ಒಂದು ಕ್ಷಣ ಪೊಲೀಸರೇ ಶಾಕ್ ಆಗಿದ್ದಾರೆ.
ಮಹಿಳೆಯರ ಒಳಉಡುಪುಗಳು ಪತ್ತೆ
ಆರೋಪಿ ಅಮಲ್ ವಾಸವಾಗಿದ್ದ ಮನೆಯಲ್ಲಿಯೂ ಮಹಿಳೆಯರ ಒಳಉಡುಪುಗಳು ಪತ್ತೆಯಾಗಿವೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…