ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ ಮಹಿಳೆಯರಂತೆ ವೇಷ ಧರಿಸಿ ಈ ಕೃತ್ಯ ಎಸಗುತ್ತಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರ ಮೇಲೆ ಈ ಸೈಕೋಪಾತ್‌ನನ್ನು ಬಂಧನ‌ ಮಾಡಲಾಗಿದೆ.

ಚಾಮರಾಜನಗರದ ವಿವಿಧ ಬಡಾವಣೆಗಳಲ್ಲಿ ಬಟ್ಟೆ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಮಾತ್ರವೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಅಮೃತ್, ಇದೀಗ ಸೈಕೋಪಾತ್‌ನನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ನಗರದ ಇಂದಿರಾ ನಗರ, ಹೌಸಿಂಗ್ ಬೋರ್ಡ್ ಕಾಲೋನಿ ಹಾಗೂ ಕರಿನಂಜನಪುರ ಬಡಾವಣೆಗಳಲ್ಲಿ ಕಳೆದ ಕೆಲವು ವಾರಗಳಿಂದ ನಿಗೂಢ ಕಳ್ಳತನಗಳು ನಡೆಯುತ್ತಿದ್ದವು. ಜನರು ತಮ್ಮ ಮನೆಯಂಗಳದಲ್ಲಿ ಅಥವಾ ಟೆರೇಸ್ ಮೇಲೆ ಒಗೆದು ಒಣಗಲು ಹಾಕಿದ್ದ ಬಟ್ಟೆಗಳ ಪೈಕಿ ಕೇವಲ ಮಹಿಳೆಯರ ಒಳ ಉಡುಪುಗಳು ಮಾತ್ರ ನಾಪತ್ತೆಯಾಗುತ್ತಿದ್ದವು. ಮೊದಮೊದಲು ಇದು ಗಾಳಿಗೆ ಹಾರಿ ಹೋಗಿರಬಹುದು ಎಂದು ಭಾವಿಸಿದ್ದ ನಿವಾಸಿಗಳಿಗೆ, ಪದೇ ಪದೇ ಇವೇ ಬಟ್ಟೆಗಳು ಕಾಣೆಯಾಗುತ್ತಿರುವುದು ಅನುಮಾನ ಮೂಡಿಸಿತ್ತು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.

ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಬಡಾವಣೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ದೃಶ್ಯಗಳು ಕಂಡುಬಂದಿದ್ದವು. ಮಧ್ಯರಾತ್ರಿ 1 ರಿಂದ 3 ಗಂಟೆಯ ಸಮಯದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಬಟ್ಟೆಗಳನ್ನು ಧರಿಸಿ, ಮುಖಕ್ಕೆ ಮುಸುಕು ಹಾಕಿಕೊಂಡು ಜನವಸತಿ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿ ಅಮೃತ್‌ನನ್ನು ಸೆರೆಹಿಡಿದಿದ್ದಾರೆ.

ಆರೋಪಿ ಅಮೃತ್ ಕೇವಲ ಕಳ್ಳತನ ಮಾಡುವುದಷ್ಟೇ ಅಲ್ಲದೆ, ತಾನೂ ಕೂಡ ಮಹಿಳೆಯಂತೆ ಬಟ್ಟೆ ಧರಿಸಿ ನಿರ್ಜನ ಪ್ರದೇಶಗಳಲ್ಲಿ ಮತ್ತು ಬಡಾವಣೆಗಳ ಗಲ್ಲಿಗಳಲ್ಲಿ ಓಡಾಡುತ್ತಿದ್ದ. ಮನೆಯವರು ಮಲಗಿರುವ ಸಮಯವನ್ನು ನೋಡಿ ಕಾಂಪೌಂಡ್ ಹಾರಿ ಒಳಗೆ ನುಗ್ಗಿ, ಒಣಗಲು ಹಾಕಿದ್ದ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಈತನ ಈ ವಿಚಿತ್ರ ನಡವಳಿಕೆಯಿಂದಾಗಿ ಪೊಲೀಸರು ಈತನನ್ನು ಸೈಕೋಪಾತ್ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈತ ಕದ್ದ ಬಟ್ಟೆಗಳನ್ನು ಏನು ಮಾಡುತ್ತಿದ್ದ? ಅಥವಾ ಯಾವುದಾದರೂ ಮಾನಸಿಕ ವಿಕೃತಿ ಹೊಂದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಂಧಿತ ಅಮೃತ್‌ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಈತ ತನ್ನ ಕೃತ್ಯಗಳನ್ನು ಒಪ್ಪಿಕೊಂಡಿದ್ದಾನೆ. ಆದರೆ, ಆತನ ವರ್ತನೆಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ತಜ್ಞರ ತಪಾಸಣೆಗೆ ಒಳಪಡಿಸಿದ್ದಾರೆ. ಕಳ್ಳತನದ ಉದ್ದೇಶ ಕೇವಲ ಹಣ ಗಳಿಸುವುದಾಗಿರದೆ, ಯಾವುದೋ ಮಾನಸಿಕ ವಿಕೃತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಈ ಸೈಕೋಪಾತ್ ಕಳ್ಳನ ಬಂಧನದಿಂದಾಗಿ ಇಂದಿರಾ ನಗರ ಮತ್ತು ಹೌಸಿಂಗ್ ಬೋರ್ಡ್ ಬಡಾವಣೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೋ ಮಹಿಳೆಯಂತೆ ಓಡಾಡುವುದನ್ನು ನೋಡಿ ದೆವ್ವದ ಕಾಟವಿರಬಹುದು ಎಂದು ಕೆಲವರು ಭಯಗೊಂಡಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 minutes ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

41 minutes ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

3 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

22 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

24 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago