ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ ಮಹಿಳೆಯರಂತೆ ವೇಷ ಧರಿಸಿ ಈ ಕೃತ್ಯ ಎಸಗುತ್ತಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರ ಮೇಲೆ ಈ ಸೈಕೋಪಾತ್ನನ್ನು ಬಂಧನ ಮಾಡಲಾಗಿದೆ.
ಚಾಮರಾಜನಗರದ ವಿವಿಧ ಬಡಾವಣೆಗಳಲ್ಲಿ ಬಟ್ಟೆ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಮಾತ್ರವೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಅಮೃತ್, ಇದೀಗ ಸೈಕೋಪಾತ್ನನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ವಿವರ
ನಗರದ ಇಂದಿರಾ ನಗರ, ಹೌಸಿಂಗ್ ಬೋರ್ಡ್ ಕಾಲೋನಿ ಹಾಗೂ ಕರಿನಂಜನಪುರ ಬಡಾವಣೆಗಳಲ್ಲಿ ಕಳೆದ ಕೆಲವು ವಾರಗಳಿಂದ ನಿಗೂಢ ಕಳ್ಳತನಗಳು ನಡೆಯುತ್ತಿದ್ದವು. ಜನರು ತಮ್ಮ ಮನೆಯಂಗಳದಲ್ಲಿ ಅಥವಾ ಟೆರೇಸ್ ಮೇಲೆ ಒಗೆದು ಒಣಗಲು ಹಾಕಿದ್ದ ಬಟ್ಟೆಗಳ ಪೈಕಿ ಕೇವಲ ಮಹಿಳೆಯರ ಒಳ ಉಡುಪುಗಳು ಮಾತ್ರ ನಾಪತ್ತೆಯಾಗುತ್ತಿದ್ದವು. ಮೊದಮೊದಲು ಇದು ಗಾಳಿಗೆ ಹಾರಿ ಹೋಗಿರಬಹುದು ಎಂದು ಭಾವಿಸಿದ್ದ ನಿವಾಸಿಗಳಿಗೆ, ಪದೇ ಪದೇ ಇವೇ ಬಟ್ಟೆಗಳು ಕಾಣೆಯಾಗುತ್ತಿರುವುದು ಅನುಮಾನ ಮೂಡಿಸಿತ್ತು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.
ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಬಡಾವಣೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ದೃಶ್ಯಗಳು ಕಂಡುಬಂದಿದ್ದವು. ಮಧ್ಯರಾತ್ರಿ 1 ರಿಂದ 3 ಗಂಟೆಯ ಸಮಯದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಬಟ್ಟೆಗಳನ್ನು ಧರಿಸಿ, ಮುಖಕ್ಕೆ ಮುಸುಕು ಹಾಕಿಕೊಂಡು ಜನವಸತಿ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿ ಅಮೃತ್ನನ್ನು ಸೆರೆಹಿಡಿದಿದ್ದಾರೆ.
ಆರೋಪಿ ಅಮೃತ್ ಕೇವಲ ಕಳ್ಳತನ ಮಾಡುವುದಷ್ಟೇ ಅಲ್ಲದೆ, ತಾನೂ ಕೂಡ ಮಹಿಳೆಯಂತೆ ಬಟ್ಟೆ ಧರಿಸಿ ನಿರ್ಜನ ಪ್ರದೇಶಗಳಲ್ಲಿ ಮತ್ತು ಬಡಾವಣೆಗಳ ಗಲ್ಲಿಗಳಲ್ಲಿ ಓಡಾಡುತ್ತಿದ್ದ. ಮನೆಯವರು ಮಲಗಿರುವ ಸಮಯವನ್ನು ನೋಡಿ ಕಾಂಪೌಂಡ್ ಹಾರಿ ಒಳಗೆ ನುಗ್ಗಿ, ಒಣಗಲು ಹಾಕಿದ್ದ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಈತನ ಈ ವಿಚಿತ್ರ ನಡವಳಿಕೆಯಿಂದಾಗಿ ಪೊಲೀಸರು ಈತನನ್ನು ಸೈಕೋಪಾತ್ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈತ ಕದ್ದ ಬಟ್ಟೆಗಳನ್ನು ಏನು ಮಾಡುತ್ತಿದ್ದ? ಅಥವಾ ಯಾವುದಾದರೂ ಮಾನಸಿಕ ವಿಕೃತಿ ಹೊಂದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಂಧಿತ ಅಮೃತ್ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಈತ ತನ್ನ ಕೃತ್ಯಗಳನ್ನು ಒಪ್ಪಿಕೊಂಡಿದ್ದಾನೆ. ಆದರೆ, ಆತನ ವರ್ತನೆಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ತಜ್ಞರ ತಪಾಸಣೆಗೆ ಒಳಪಡಿಸಿದ್ದಾರೆ. ಕಳ್ಳತನದ ಉದ್ದೇಶ ಕೇವಲ ಹಣ ಗಳಿಸುವುದಾಗಿರದೆ, ಯಾವುದೋ ಮಾನಸಿಕ ವಿಕೃತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಈ ಸೈಕೋಪಾತ್ ಕಳ್ಳನ ಬಂಧನದಿಂದಾಗಿ ಇಂದಿರಾ ನಗರ ಮತ್ತು ಹೌಸಿಂಗ್ ಬೋರ್ಡ್ ಬಡಾವಣೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೋ ಮಹಿಳೆಯಂತೆ ಓಡಾಡುವುದನ್ನು ನೋಡಿ ದೆವ್ವದ ಕಾಟವಿರಬಹುದು ಎಂದು ಕೆಲವರು ಭಯಗೊಂಡಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…