ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ ಮಹಿಳೆಯರಂತೆ ವೇಷ ಧರಿಸಿ ಈ ಕೃತ್ಯ ಎಸಗುತ್ತಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರ ಮೇಲೆ ಈ ಸೈಕೋಪಾತ್‌ನನ್ನು ಬಂಧನ‌ ಮಾಡಲಾಗಿದೆ.

ಚಾಮರಾಜನಗರದ ವಿವಿಧ ಬಡಾವಣೆಗಳಲ್ಲಿ ಬಟ್ಟೆ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಮಾತ್ರವೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಅಮೃತ್, ಇದೀಗ ಸೈಕೋಪಾತ್‌ನನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ನಗರದ ಇಂದಿರಾ ನಗರ, ಹೌಸಿಂಗ್ ಬೋರ್ಡ್ ಕಾಲೋನಿ ಹಾಗೂ ಕರಿನಂಜನಪುರ ಬಡಾವಣೆಗಳಲ್ಲಿ ಕಳೆದ ಕೆಲವು ವಾರಗಳಿಂದ ನಿಗೂಢ ಕಳ್ಳತನಗಳು ನಡೆಯುತ್ತಿದ್ದವು. ಜನರು ತಮ್ಮ ಮನೆಯಂಗಳದಲ್ಲಿ ಅಥವಾ ಟೆರೇಸ್ ಮೇಲೆ ಒಗೆದು ಒಣಗಲು ಹಾಕಿದ್ದ ಬಟ್ಟೆಗಳ ಪೈಕಿ ಕೇವಲ ಮಹಿಳೆಯರ ಒಳ ಉಡುಪುಗಳು ಮಾತ್ರ ನಾಪತ್ತೆಯಾಗುತ್ತಿದ್ದವು. ಮೊದಮೊದಲು ಇದು ಗಾಳಿಗೆ ಹಾರಿ ಹೋಗಿರಬಹುದು ಎಂದು ಭಾವಿಸಿದ್ದ ನಿವಾಸಿಗಳಿಗೆ, ಪದೇ ಪದೇ ಇವೇ ಬಟ್ಟೆಗಳು ಕಾಣೆಯಾಗುತ್ತಿರುವುದು ಅನುಮಾನ ಮೂಡಿಸಿತ್ತು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.

ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಬಡಾವಣೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ದೃಶ್ಯಗಳು ಕಂಡುಬಂದಿದ್ದವು. ಮಧ್ಯರಾತ್ರಿ 1 ರಿಂದ 3 ಗಂಟೆಯ ಸಮಯದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಬಟ್ಟೆಗಳನ್ನು ಧರಿಸಿ, ಮುಖಕ್ಕೆ ಮುಸುಕು ಹಾಕಿಕೊಂಡು ಜನವಸತಿ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿ ಅಮೃತ್‌ನನ್ನು ಸೆರೆಹಿಡಿದಿದ್ದಾರೆ.

ಆರೋಪಿ ಅಮೃತ್ ಕೇವಲ ಕಳ್ಳತನ ಮಾಡುವುದಷ್ಟೇ ಅಲ್ಲದೆ, ತಾನೂ ಕೂಡ ಮಹಿಳೆಯಂತೆ ಬಟ್ಟೆ ಧರಿಸಿ ನಿರ್ಜನ ಪ್ರದೇಶಗಳಲ್ಲಿ ಮತ್ತು ಬಡಾವಣೆಗಳ ಗಲ್ಲಿಗಳಲ್ಲಿ ಓಡಾಡುತ್ತಿದ್ದ. ಮನೆಯವರು ಮಲಗಿರುವ ಸಮಯವನ್ನು ನೋಡಿ ಕಾಂಪೌಂಡ್ ಹಾರಿ ಒಳಗೆ ನುಗ್ಗಿ, ಒಣಗಲು ಹಾಕಿದ್ದ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಈತನ ಈ ವಿಚಿತ್ರ ನಡವಳಿಕೆಯಿಂದಾಗಿ ಪೊಲೀಸರು ಈತನನ್ನು ಸೈಕೋಪಾತ್ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈತ ಕದ್ದ ಬಟ್ಟೆಗಳನ್ನು ಏನು ಮಾಡುತ್ತಿದ್ದ? ಅಥವಾ ಯಾವುದಾದರೂ ಮಾನಸಿಕ ವಿಕೃತಿ ಹೊಂದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಂಧಿತ ಅಮೃತ್‌ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಈತ ತನ್ನ ಕೃತ್ಯಗಳನ್ನು ಒಪ್ಪಿಕೊಂಡಿದ್ದಾನೆ. ಆದರೆ, ಆತನ ವರ್ತನೆಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ತಜ್ಞರ ತಪಾಸಣೆಗೆ ಒಳಪಡಿಸಿದ್ದಾರೆ. ಕಳ್ಳತನದ ಉದ್ದೇಶ ಕೇವಲ ಹಣ ಗಳಿಸುವುದಾಗಿರದೆ, ಯಾವುದೋ ಮಾನಸಿಕ ವಿಕೃತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಈ ಸೈಕೋಪಾತ್ ಕಳ್ಳನ ಬಂಧನದಿಂದಾಗಿ ಇಂದಿರಾ ನಗರ ಮತ್ತು ಹೌಸಿಂಗ್ ಬೋರ್ಡ್ ಬಡಾವಣೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೋ ಮಹಿಳೆಯಂತೆ ಓಡಾಡುವುದನ್ನು ನೋಡಿ ದೆವ್ವದ ಕಾಟವಿರಬಹುದು ಎಂದು ಕೆಲವರು ಭಯಗೊಂಡಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

4 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

16 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

17 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago