ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ ಮಹಿಳೆಯರಂತೆ ವೇಷ ಧರಿಸಿ ಈ ಕೃತ್ಯ ಎಸಗುತ್ತಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರ ಮೇಲೆ ಈ ಸೈಕೋಪಾತ್‌ನನ್ನು ಬಂಧನ‌ ಮಾಡಲಾಗಿದೆ.

ಚಾಮರಾಜನಗರದ ವಿವಿಧ ಬಡಾವಣೆಗಳಲ್ಲಿ ಬಟ್ಟೆ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಮಾತ್ರವೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಅಮೃತ್, ಇದೀಗ ಸೈಕೋಪಾತ್‌ನನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ನಗರದ ಇಂದಿರಾ ನಗರ, ಹೌಸಿಂಗ್ ಬೋರ್ಡ್ ಕಾಲೋನಿ ಹಾಗೂ ಕರಿನಂಜನಪುರ ಬಡಾವಣೆಗಳಲ್ಲಿ ಕಳೆದ ಕೆಲವು ವಾರಗಳಿಂದ ನಿಗೂಢ ಕಳ್ಳತನಗಳು ನಡೆಯುತ್ತಿದ್ದವು. ಜನರು ತಮ್ಮ ಮನೆಯಂಗಳದಲ್ಲಿ ಅಥವಾ ಟೆರೇಸ್ ಮೇಲೆ ಒಗೆದು ಒಣಗಲು ಹಾಕಿದ್ದ ಬಟ್ಟೆಗಳ ಪೈಕಿ ಕೇವಲ ಮಹಿಳೆಯರ ಒಳ ಉಡುಪುಗಳು ಮಾತ್ರ ನಾಪತ್ತೆಯಾಗುತ್ತಿದ್ದವು. ಮೊದಮೊದಲು ಇದು ಗಾಳಿಗೆ ಹಾರಿ ಹೋಗಿರಬಹುದು ಎಂದು ಭಾವಿಸಿದ್ದ ನಿವಾಸಿಗಳಿಗೆ, ಪದೇ ಪದೇ ಇವೇ ಬಟ್ಟೆಗಳು ಕಾಣೆಯಾಗುತ್ತಿರುವುದು ಅನುಮಾನ ಮೂಡಿಸಿತ್ತು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.

ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಬಡಾವಣೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ದೃಶ್ಯಗಳು ಕಂಡುಬಂದಿದ್ದವು. ಮಧ್ಯರಾತ್ರಿ 1 ರಿಂದ 3 ಗಂಟೆಯ ಸಮಯದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಬಟ್ಟೆಗಳನ್ನು ಧರಿಸಿ, ಮುಖಕ್ಕೆ ಮುಸುಕು ಹಾಕಿಕೊಂಡು ಜನವಸತಿ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿ ಅಮೃತ್‌ನನ್ನು ಸೆರೆಹಿಡಿದಿದ್ದಾರೆ.

ಆರೋಪಿ ಅಮೃತ್ ಕೇವಲ ಕಳ್ಳತನ ಮಾಡುವುದಷ್ಟೇ ಅಲ್ಲದೆ, ತಾನೂ ಕೂಡ ಮಹಿಳೆಯಂತೆ ಬಟ್ಟೆ ಧರಿಸಿ ನಿರ್ಜನ ಪ್ರದೇಶಗಳಲ್ಲಿ ಮತ್ತು ಬಡಾವಣೆಗಳ ಗಲ್ಲಿಗಳಲ್ಲಿ ಓಡಾಡುತ್ತಿದ್ದ. ಮನೆಯವರು ಮಲಗಿರುವ ಸಮಯವನ್ನು ನೋಡಿ ಕಾಂಪೌಂಡ್ ಹಾರಿ ಒಳಗೆ ನುಗ್ಗಿ, ಒಣಗಲು ಹಾಕಿದ್ದ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಈತನ ಈ ವಿಚಿತ್ರ ನಡವಳಿಕೆಯಿಂದಾಗಿ ಪೊಲೀಸರು ಈತನನ್ನು ಸೈಕೋಪಾತ್ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈತ ಕದ್ದ ಬಟ್ಟೆಗಳನ್ನು ಏನು ಮಾಡುತ್ತಿದ್ದ? ಅಥವಾ ಯಾವುದಾದರೂ ಮಾನಸಿಕ ವಿಕೃತಿ ಹೊಂದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಂಧಿತ ಅಮೃತ್‌ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ಈತ ತನ್ನ ಕೃತ್ಯಗಳನ್ನು ಒಪ್ಪಿಕೊಂಡಿದ್ದಾನೆ. ಆದರೆ, ಆತನ ವರ್ತನೆಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆ ಮತ್ತು ಮಾನಸಿಕ ತಜ್ಞರ ತಪಾಸಣೆಗೆ ಒಳಪಡಿಸಿದ್ದಾರೆ. ಕಳ್ಳತನದ ಉದ್ದೇಶ ಕೇವಲ ಹಣ ಗಳಿಸುವುದಾಗಿರದೆ, ಯಾವುದೋ ಮಾನಸಿಕ ವಿಕೃತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಈ ಸೈಕೋಪಾತ್ ಕಳ್ಳನ ಬಂಧನದಿಂದಾಗಿ ಇಂದಿರಾ ನಗರ ಮತ್ತು ಹೌಸಿಂಗ್ ಬೋರ್ಡ್ ಬಡಾವಣೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ವೇಳೆ ಯಾರೋ ಮಹಿಳೆಯಂತೆ ಓಡಾಡುವುದನ್ನು ನೋಡಿ ದೆವ್ವದ ಕಾಟವಿರಬಹುದು ಎಂದು ಕೆಲವರು ಭಯಗೊಂಡಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

30 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago