Categories: ಕೋಲಾರ

ಮಹಿಳೆಯರ ಘನತೆಯುಕ್ತ ಬದುಕು ಹಕ್ಕಾಗಬೇಕು- ಜೆಎಂಎಸ್ ಗೌರಮ್ಮ

ಕೋಲಾರ: ಮಹಿಳೆಯರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕಾದರೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಘನತೆಯುಕ್ತ ಬದುಕು ಹಕ್ಕಾಗಬೇಕು ಜೊತೆಗೆ ಅನ್ಯಾಯದ ವಿರುದ್ದ ಪ್ರಶ್ನೆ ಮಾಡುವ ಮನಸ್ಥಿತಿ ಎಲ್ಲಾ ಮಹಿಳೆಯರಲ್ಲಿ ಬರಬೇಕಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಗೌರಮ್ಮ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಿಐಟಿಯು ನೇತೃತ್ವದ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ವತಿಯಿಂದ 117 ನೆಯ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಭ್ರೂಣ ಹತ್ಯೆಗಳು ಮಾರ್ಯಾದೆ ಹತ್ಯೆಗಳಿಗೆ ಕಡಿವಾಣ ಶಿಕ್ಷಣವಾಗಬೇಕು ಪುರುಷರು ಅಷ್ಟೇ ಕೇವಲ ಸಭೆ ಸಮಾರಂಭಗಳಲ್ಲಿ ಮಹಿಳೆಯರಿಗೆ ಗೌರವಿಸಿದರೆ ಸಾಲದು ಮಹಿಳೆಯರ ಬದುಕಿಗೆ ದಾರಿಯಾಗಿರಲು ಆರ್ಥಿಕವಾಗಿ ಬೆಂಬಲಿಸಬೇಕು ದುಡಿಯುವ ಮಹಿಳೆಯರಿಗೆ 8 ಗಂಟೆ ದುಡಿಮೆ ಬದಲಿಗೆ 12 ಗಂಟೆ ಮಾಡುವುದನ್ನು ಎಲ್ಲಾ ಮಹಿಳೆಯರು ವಿರೋಧಿಸಬೇಕು ಎಂದು ತಿಳಿಸಿದರು.

ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಶೋಷಣೆ ನಡೆಯುತ್ತಲೇ ಇದೆ ಅಂಕಿಅಂಶಗಳ ಪ್ರಕಾರ ದೂರು ದಾಖಲಾದರು ಶಿಕ್ಷೆ ಮಾತ್ರ ಕಡಿಮೆಯಾಗಿದ್ದರಿಂದಲೇ ಹೆಚ್ಚು ಘಟನೆಗಳು ನಡೆಯುತ್ತಿವೆ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ಮಹಿಳೆಯರು ಧೈರ್ಯ, ಸಾಹಸ ಜನ ಮೆಚ್ಚುವಂತ ಕಾರ್ಯ ಸರ್ಕಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರತಿಯೊಂದು ರಂಗದಲ್ಲಿ ಅದರಲ್ಲೂ ರಾಜಕೀಯ ರಂಗದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಬೇಕು. ಮಹಿಳಾ ಮೀಸಲಾತಿಗೆ ನಿರಂತರ ಶ್ರಮ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಸಮಾನತೆಯ ಸಮಾಜ ನಿರ್ಮಾಣವಾಗಬೇಕಾದರೆ ಪುರುಷನಷ್ಟೇ ಮಹಿಳೆಯರಿಗೂ ಸಮಾನ ಅವಕಾಶ ಸಿಗಬೇಕಿದೆ. ಇಂತಹ ಅವಕಾಶ ದೊರೆತರೆ ಮಹಿಳೆಯರು ತಮ್ಮ ಪ್ರತಿಭೆ, ಸಾಮರ್ಥ್ಯ‌ ವ್ಯಕ್ತಪಡಿಸುತ್ತಾರೆ. ಸಮಾನತೆ ನಿರಂತರ ಹೋರಾಟದ ಅಗತ್ಯತೆ ಇದೆ. ನಮ್ಮ ಕುಟುಂಬದಿಂದಲೇ ಸಮಾನತೆ ಆರಂಭವಾದಾಗ ಮಾತ್ರ ಸಮಾಜದಲ್ಲಿ ಸಮಾನತೆ, ಬದಲಾವಣೆ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕಿ ಆರ್ ಅಂಜಲಮ್ಮ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು ಮಹಿಳೆಯರು ವಿದ್ಯಾವಂತರಾಗಿ ಮುಂದೆ ಬರಬೇಕು. ಶೋಷಣೆ, ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ವರದಕ್ಷಿಣೆ, ಬಾಲ್ಯ ವಿವಾಹ, ಲೈಂಗಿಕ ಕಿರುಕುಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಹರಣಿ, ಕೆ.ಪಿ.ಆರ್.ಎಸ್ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ, ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಂಘಟನಾ ಸಂಚಾಲಕಿ ಎಂ.ಜಯಲಕ್ಷ್ಮಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಗಾಂಧಿನಗರ ಮಂಜುಳಾ ಜಿಲ್ಲಾ ಖಜಾಂಚಿ ಸುಜಾತ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಂಜಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

19 minutes ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

8 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

11 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

14 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

15 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

17 hours ago