Categories: ಕೋಲಾರ

ಮಹಿಳೆಯರ ಘನತೆಯುಕ್ತ ಬದುಕು ಹಕ್ಕಾಗಬೇಕು- ಜೆಎಂಎಸ್ ಗೌರಮ್ಮ

ಕೋಲಾರ: ಮಹಿಳೆಯರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕಾದರೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಘನತೆಯುಕ್ತ ಬದುಕು ಹಕ್ಕಾಗಬೇಕು ಜೊತೆಗೆ ಅನ್ಯಾಯದ ವಿರುದ್ದ ಪ್ರಶ್ನೆ ಮಾಡುವ ಮನಸ್ಥಿತಿ ಎಲ್ಲಾ ಮಹಿಳೆಯರಲ್ಲಿ ಬರಬೇಕಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಗೌರಮ್ಮ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಿಐಟಿಯು ನೇತೃತ್ವದ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ವತಿಯಿಂದ 117 ನೆಯ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಭ್ರೂಣ ಹತ್ಯೆಗಳು ಮಾರ್ಯಾದೆ ಹತ್ಯೆಗಳಿಗೆ ಕಡಿವಾಣ ಶಿಕ್ಷಣವಾಗಬೇಕು ಪುರುಷರು ಅಷ್ಟೇ ಕೇವಲ ಸಭೆ ಸಮಾರಂಭಗಳಲ್ಲಿ ಮಹಿಳೆಯರಿಗೆ ಗೌರವಿಸಿದರೆ ಸಾಲದು ಮಹಿಳೆಯರ ಬದುಕಿಗೆ ದಾರಿಯಾಗಿರಲು ಆರ್ಥಿಕವಾಗಿ ಬೆಂಬಲಿಸಬೇಕು ದುಡಿಯುವ ಮಹಿಳೆಯರಿಗೆ 8 ಗಂಟೆ ದುಡಿಮೆ ಬದಲಿಗೆ 12 ಗಂಟೆ ಮಾಡುವುದನ್ನು ಎಲ್ಲಾ ಮಹಿಳೆಯರು ವಿರೋಧಿಸಬೇಕು ಎಂದು ತಿಳಿಸಿದರು.

ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಶೋಷಣೆ ನಡೆಯುತ್ತಲೇ ಇದೆ ಅಂಕಿಅಂಶಗಳ ಪ್ರಕಾರ ದೂರು ದಾಖಲಾದರು ಶಿಕ್ಷೆ ಮಾತ್ರ ಕಡಿಮೆಯಾಗಿದ್ದರಿಂದಲೇ ಹೆಚ್ಚು ಘಟನೆಗಳು ನಡೆಯುತ್ತಿವೆ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ಮಹಿಳೆಯರು ಧೈರ್ಯ, ಸಾಹಸ ಜನ ಮೆಚ್ಚುವಂತ ಕಾರ್ಯ ಸರ್ಕಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರತಿಯೊಂದು ರಂಗದಲ್ಲಿ ಅದರಲ್ಲೂ ರಾಜಕೀಯ ರಂಗದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಬೇಕು. ಮಹಿಳಾ ಮೀಸಲಾತಿಗೆ ನಿರಂತರ ಶ್ರಮ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಸಮಾನತೆಯ ಸಮಾಜ ನಿರ್ಮಾಣವಾಗಬೇಕಾದರೆ ಪುರುಷನಷ್ಟೇ ಮಹಿಳೆಯರಿಗೂ ಸಮಾನ ಅವಕಾಶ ಸಿಗಬೇಕಿದೆ. ಇಂತಹ ಅವಕಾಶ ದೊರೆತರೆ ಮಹಿಳೆಯರು ತಮ್ಮ ಪ್ರತಿಭೆ, ಸಾಮರ್ಥ್ಯ‌ ವ್ಯಕ್ತಪಡಿಸುತ್ತಾರೆ. ಸಮಾನತೆ ನಿರಂತರ ಹೋರಾಟದ ಅಗತ್ಯತೆ ಇದೆ. ನಮ್ಮ ಕುಟುಂಬದಿಂದಲೇ ಸಮಾನತೆ ಆರಂಭವಾದಾಗ ಮಾತ್ರ ಸಮಾಜದಲ್ಲಿ ಸಮಾನತೆ, ಬದಲಾವಣೆ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕಿ ಆರ್ ಅಂಜಲಮ್ಮ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು ಮಹಿಳೆಯರು ವಿದ್ಯಾವಂತರಾಗಿ ಮುಂದೆ ಬರಬೇಕು. ಶೋಷಣೆ, ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ವರದಕ್ಷಿಣೆ, ಬಾಲ್ಯ ವಿವಾಹ, ಲೈಂಗಿಕ ಕಿರುಕುಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಹರಣಿ, ಕೆ.ಪಿ.ಆರ್.ಎಸ್ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ, ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಂಘಟನಾ ಸಂಚಾಲಕಿ ಎಂ.ಜಯಲಕ್ಷ್ಮಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಗಾಂಧಿನಗರ ಮಂಜುಳಾ ಜಿಲ್ಲಾ ಖಜಾಂಚಿ ಸುಜಾತ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಂಜಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

11 minutes ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

12 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

13 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

16 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

18 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

20 hours ago