Categories: ಕೋಲಾರ

ಮಹಿಳೆಯರ ಘನತೆಯುಕ್ತ ಬದುಕು ಹಕ್ಕಾಗಬೇಕು- ಜೆಎಂಎಸ್ ಗೌರಮ್ಮ

ಕೋಲಾರ: ಮಹಿಳೆಯರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕಾದರೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಘನತೆಯುಕ್ತ ಬದುಕು ಹಕ್ಕಾಗಬೇಕು ಜೊತೆಗೆ ಅನ್ಯಾಯದ ವಿರುದ್ದ ಪ್ರಶ್ನೆ ಮಾಡುವ ಮನಸ್ಥಿತಿ ಎಲ್ಲಾ ಮಹಿಳೆಯರಲ್ಲಿ ಬರಬೇಕಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಗೌರಮ್ಮ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಿಐಟಿಯು ನೇತೃತ್ವದ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ವತಿಯಿಂದ 117 ನೆಯ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಭ್ರೂಣ ಹತ್ಯೆಗಳು ಮಾರ್ಯಾದೆ ಹತ್ಯೆಗಳಿಗೆ ಕಡಿವಾಣ ಶಿಕ್ಷಣವಾಗಬೇಕು ಪುರುಷರು ಅಷ್ಟೇ ಕೇವಲ ಸಭೆ ಸಮಾರಂಭಗಳಲ್ಲಿ ಮಹಿಳೆಯರಿಗೆ ಗೌರವಿಸಿದರೆ ಸಾಲದು ಮಹಿಳೆಯರ ಬದುಕಿಗೆ ದಾರಿಯಾಗಿರಲು ಆರ್ಥಿಕವಾಗಿ ಬೆಂಬಲಿಸಬೇಕು ದುಡಿಯುವ ಮಹಿಳೆಯರಿಗೆ 8 ಗಂಟೆ ದುಡಿಮೆ ಬದಲಿಗೆ 12 ಗಂಟೆ ಮಾಡುವುದನ್ನು ಎಲ್ಲಾ ಮಹಿಳೆಯರು ವಿರೋಧಿಸಬೇಕು ಎಂದು ತಿಳಿಸಿದರು.

ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಶೋಷಣೆ ನಡೆಯುತ್ತಲೇ ಇದೆ ಅಂಕಿಅಂಶಗಳ ಪ್ರಕಾರ ದೂರು ದಾಖಲಾದರು ಶಿಕ್ಷೆ ಮಾತ್ರ ಕಡಿಮೆಯಾಗಿದ್ದರಿಂದಲೇ ಹೆಚ್ಚು ಘಟನೆಗಳು ನಡೆಯುತ್ತಿವೆ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ಮಹಿಳೆಯರು ಧೈರ್ಯ, ಸಾಹಸ ಜನ ಮೆಚ್ಚುವಂತ ಕಾರ್ಯ ಸರ್ಕಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರತಿಯೊಂದು ರಂಗದಲ್ಲಿ ಅದರಲ್ಲೂ ರಾಜಕೀಯ ರಂಗದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಬೇಕು. ಮಹಿಳಾ ಮೀಸಲಾತಿಗೆ ನಿರಂತರ ಶ್ರಮ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಸಮಾನತೆಯ ಸಮಾಜ ನಿರ್ಮಾಣವಾಗಬೇಕಾದರೆ ಪುರುಷನಷ್ಟೇ ಮಹಿಳೆಯರಿಗೂ ಸಮಾನ ಅವಕಾಶ ಸಿಗಬೇಕಿದೆ. ಇಂತಹ ಅವಕಾಶ ದೊರೆತರೆ ಮಹಿಳೆಯರು ತಮ್ಮ ಪ್ರತಿಭೆ, ಸಾಮರ್ಥ್ಯ‌ ವ್ಯಕ್ತಪಡಿಸುತ್ತಾರೆ. ಸಮಾನತೆ ನಿರಂತರ ಹೋರಾಟದ ಅಗತ್ಯತೆ ಇದೆ. ನಮ್ಮ ಕುಟುಂಬದಿಂದಲೇ ಸಮಾನತೆ ಆರಂಭವಾದಾಗ ಮಾತ್ರ ಸಮಾಜದಲ್ಲಿ ಸಮಾನತೆ, ಬದಲಾವಣೆ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕಿ ಆರ್ ಅಂಜಲಮ್ಮ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು ಮಹಿಳೆಯರು ವಿದ್ಯಾವಂತರಾಗಿ ಮುಂದೆ ಬರಬೇಕು. ಶೋಷಣೆ, ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ವರದಕ್ಷಿಣೆ, ಬಾಲ್ಯ ವಿವಾಹ, ಲೈಂಗಿಕ ಕಿರುಕುಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಹರಣಿ, ಕೆ.ಪಿ.ಆರ್.ಎಸ್ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ, ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಂಘಟನಾ ಸಂಚಾಲಕಿ ಎಂ.ಜಯಲಕ್ಷ್ಮಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಗಾಂಧಿನಗರ ಮಂಜುಳಾ ಜಿಲ್ಲಾ ಖಜಾಂಚಿ ಸುಜಾತ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಂಜಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

8 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

10 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

23 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

1 day ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

1 day ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago