Categories: ಕೋಲಾರ

ಮಹಿಳೆಯರ ಘನತೆಯುಕ್ತ ಬದುಕು ಹಕ್ಕಾಗಬೇಕು- ಜೆಎಂಎಸ್ ಗೌರಮ್ಮ

ಕೋಲಾರ: ಮಹಿಳೆಯರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕಾದರೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಘನತೆಯುಕ್ತ ಬದುಕು ಹಕ್ಕಾಗಬೇಕು ಜೊತೆಗೆ ಅನ್ಯಾಯದ ವಿರುದ್ದ ಪ್ರಶ್ನೆ ಮಾಡುವ ಮನಸ್ಥಿತಿ ಎಲ್ಲಾ ಮಹಿಳೆಯರಲ್ಲಿ ಬರಬೇಕಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಗೌರಮ್ಮ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸಿಐಟಿಯು ನೇತೃತ್ವದ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ವತಿಯಿಂದ 117 ನೆಯ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿ ಭ್ರೂಣ ಹತ್ಯೆಗಳು ಮಾರ್ಯಾದೆ ಹತ್ಯೆಗಳಿಗೆ ಕಡಿವಾಣ ಶಿಕ್ಷಣವಾಗಬೇಕು ಪುರುಷರು ಅಷ್ಟೇ ಕೇವಲ ಸಭೆ ಸಮಾರಂಭಗಳಲ್ಲಿ ಮಹಿಳೆಯರಿಗೆ ಗೌರವಿಸಿದರೆ ಸಾಲದು ಮಹಿಳೆಯರ ಬದುಕಿಗೆ ದಾರಿಯಾಗಿರಲು ಆರ್ಥಿಕವಾಗಿ ಬೆಂಬಲಿಸಬೇಕು ದುಡಿಯುವ ಮಹಿಳೆಯರಿಗೆ 8 ಗಂಟೆ ದುಡಿಮೆ ಬದಲಿಗೆ 12 ಗಂಟೆ ಮಾಡುವುದನ್ನು ಎಲ್ಲಾ ಮಹಿಳೆಯರು ವಿರೋಧಿಸಬೇಕು ಎಂದು ತಿಳಿಸಿದರು.

ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಶೋಷಣೆ ನಡೆಯುತ್ತಲೇ ಇದೆ ಅಂಕಿಅಂಶಗಳ ಪ್ರಕಾರ ದೂರು ದಾಖಲಾದರು ಶಿಕ್ಷೆ ಮಾತ್ರ ಕಡಿಮೆಯಾಗಿದ್ದರಿಂದಲೇ ಹೆಚ್ಚು ಘಟನೆಗಳು ನಡೆಯುತ್ತಿವೆ ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದ ಮಹಿಳೆಯರು ಧೈರ್ಯ, ಸಾಹಸ ಜನ ಮೆಚ್ಚುವಂತ ಕಾರ್ಯ ಸರ್ಕಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರತಿಯೊಂದು ರಂಗದಲ್ಲಿ ಅದರಲ್ಲೂ ರಾಜಕೀಯ ರಂಗದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಬೇಕು. ಮಹಿಳಾ ಮೀಸಲಾತಿಗೆ ನಿರಂತರ ಶ್ರಮ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ಸಮಾನತೆಯ ಸಮಾಜ ನಿರ್ಮಾಣವಾಗಬೇಕಾದರೆ ಪುರುಷನಷ್ಟೇ ಮಹಿಳೆಯರಿಗೂ ಸಮಾನ ಅವಕಾಶ ಸಿಗಬೇಕಿದೆ. ಇಂತಹ ಅವಕಾಶ ದೊರೆತರೆ ಮಹಿಳೆಯರು ತಮ್ಮ ಪ್ರತಿಭೆ, ಸಾಮರ್ಥ್ಯ‌ ವ್ಯಕ್ತಪಡಿಸುತ್ತಾರೆ. ಸಮಾನತೆ ನಿರಂತರ ಹೋರಾಟದ ಅಗತ್ಯತೆ ಇದೆ. ನಮ್ಮ ಕುಟುಂಬದಿಂದಲೇ ಸಮಾನತೆ ಆರಂಭವಾದಾಗ ಮಾತ್ರ ಸಮಾಜದಲ್ಲಿ ಸಮಾನತೆ, ಬದಲಾವಣೆ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕಿ ಆರ್ ಅಂಜಲಮ್ಮ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು ಮಹಿಳೆಯರು ವಿದ್ಯಾವಂತರಾಗಿ ಮುಂದೆ ಬರಬೇಕು. ಶೋಷಣೆ, ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ವರದಕ್ಷಿಣೆ, ಬಾಲ್ಯ ವಿವಾಹ, ಲೈಂಗಿಕ ಕಿರುಕುಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಹರಣಿ, ಕೆ.ಪಿ.ಆರ್.ಎಸ್ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ, ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಂಘಟನಾ ಸಂಚಾಲಕಿ ಎಂ.ಜಯಲಕ್ಷ್ಮಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಗಾಂಧಿನಗರ ಮಂಜುಳಾ ಜಿಲ್ಲಾ ಖಜಾಂಚಿ ಸುಜಾತ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಂಜಮ್ಮ ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

15 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago