ಮಹಿಳೆಯರ ಸಶಕ್ತೀಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ ಮಹಿಳಾ ಫಲಾನುಭವಿಗಳಿಗೆ ಹಮ್ಮಿಕೊಳ್ಳಲಾಗಿದ್ದ 30 ದಿನಗಳ ಉಚಿತ ಲಘು ವಾಹನ ಚಾಲನಾ ತರಬೇತಿಯ ಸಮಾರೋಪ‌ ಸಮಾರಂಭವನ್ನು ಉದ್ದೇಶಿಸಿ, ಅವರು ಮಾತನಾಡಿದರು.

ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುವುದು ಮಾತ್ರವಲ್ಲದೇ, ಬ್ಯಾಂಕಿನಲ್ಲಿ ಸಾಲ ಪಡೆದು, ಸ್ವ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗಬೇಕು ಹಾಗೂ ಪ್ರತಿ ಗ್ರಾಮ ಪಂಚಾಯಿತಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದ ವಾಹನ ಚಾಲನೆ ಮಾತ್ರವಲ್ಲದೇ, ಪ್ರವಾಸೋದ್ಯಮ ಚಟುವಟಿಕೆಗಳಿಗೂ ವಾಹನ ಚಾಲನೆಯ ಕೌಶಲ್ಯವನ್ನು ಬಳಸಿಕೊಳ್ಳಬಹುದು ಎಂದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸ್ಚಚ್ಛತಾ ವಾಹಿನಿಯ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ, ಸಂಸ್ಥೆಯಲ್ಲಿ ಪಡೆದ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರಲ್ಲದೆ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಕೆಲಸಗಳನ್ನು ಒಟ್ಟಿಗೆ ನಿಭಾಯಿಸುವ ಅನನ್ಯ ಶಕ್ತಿ ಕೇವಲ ಮಹಿಳೆಯರಿಗೆ ಮಾತ್ರ ಇರುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ಜೆ. ಆನಂದ್‌ ಅವರು, ಬೆಂಗಳೂರು ನಗರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸಮೀಪವಿರುವುದರಿಂದ ತರಕಾರಿಗಳಂತಹ ದಿನನಿತ್ಯದ ವಸ್ತುಗಳು, ಆಹಾರೋತ್ಪನ್ನಗಳು ಸೇರಿದಂತೆ ಸರಕು ಸಾಗಾಣಿಕೆಗೆ ವಿಫುಲ ಅವಕಾಶಗಳಿವೆ ಹಾಗೂ ಬೆಂಗಳೂರು ಅಂತರರಾಷ್ಟೃೀಯ ವಿಮಾನ ನಿಲ್ದಾಣವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ನೆಲೆಗೊಂಡಿರುವುದರಿಂದ ವಾಹನ ಚಾಲನೆಯಂತಹ ಅವಕಾಶಗಳು ಮಹಿಳೆಯರಿಗೆ ಸಾಕಷ್ಟಿವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ಸಾಂಕೇತಿಕವಾಗಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುಳಾ, ಜಿಲ್ಲಾ ವ್ಯವಸ್ಥಾಪಕರಾದ ಅಶೋಕ್‌, ವಾಹನ ಚಾಲನಾ ತರಬೇತಿಯ ತರಬೇತುದಾರರಾದ ಮಂಜೇಶ್‌, ರಶ್ಮಿ ಮತ್ತು ಸಹಾಯಕರು, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಮತ್ತು ವಿದ್ಯಾ ಹೊಸಮನಿ ಸೇರಿದಂತೆ ರುಡ್‌ಸೆಟ್‌ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಲಘು ವಾಹನ ಚಾಲನಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

3 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

14 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

15 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

15 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

16 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

23 hours ago