ಮಹಿಳೆಯರ ಸಶಕ್ತೀಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ ಮಹಿಳಾ ಫಲಾನುಭವಿಗಳಿಗೆ ಹಮ್ಮಿಕೊಳ್ಳಲಾಗಿದ್ದ 30 ದಿನಗಳ ಉಚಿತ ಲಘು ವಾಹನ ಚಾಲನಾ ತರಬೇತಿಯ ಸಮಾರೋಪ‌ ಸಮಾರಂಭವನ್ನು ಉದ್ದೇಶಿಸಿ, ಅವರು ಮಾತನಾಡಿದರು.

ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುವುದು ಮಾತ್ರವಲ್ಲದೇ, ಬ್ಯಾಂಕಿನಲ್ಲಿ ಸಾಲ ಪಡೆದು, ಸ್ವ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗಬೇಕು ಹಾಗೂ ಪ್ರತಿ ಗ್ರಾಮ ಪಂಚಾಯಿತಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದ ವಾಹನ ಚಾಲನೆ ಮಾತ್ರವಲ್ಲದೇ, ಪ್ರವಾಸೋದ್ಯಮ ಚಟುವಟಿಕೆಗಳಿಗೂ ವಾಹನ ಚಾಲನೆಯ ಕೌಶಲ್ಯವನ್ನು ಬಳಸಿಕೊಳ್ಳಬಹುದು ಎಂದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸ್ಚಚ್ಛತಾ ವಾಹಿನಿಯ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ, ಸಂಸ್ಥೆಯಲ್ಲಿ ಪಡೆದ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರಲ್ಲದೆ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಕೆಲಸಗಳನ್ನು ಒಟ್ಟಿಗೆ ನಿಭಾಯಿಸುವ ಅನನ್ಯ ಶಕ್ತಿ ಕೇವಲ ಮಹಿಳೆಯರಿಗೆ ಮಾತ್ರ ಇರುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ಜೆ. ಆನಂದ್‌ ಅವರು, ಬೆಂಗಳೂರು ನಗರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸಮೀಪವಿರುವುದರಿಂದ ತರಕಾರಿಗಳಂತಹ ದಿನನಿತ್ಯದ ವಸ್ತುಗಳು, ಆಹಾರೋತ್ಪನ್ನಗಳು ಸೇರಿದಂತೆ ಸರಕು ಸಾಗಾಣಿಕೆಗೆ ವಿಫುಲ ಅವಕಾಶಗಳಿವೆ ಹಾಗೂ ಬೆಂಗಳೂರು ಅಂತರರಾಷ್ಟೃೀಯ ವಿಮಾನ ನಿಲ್ದಾಣವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ನೆಲೆಗೊಂಡಿರುವುದರಿಂದ ವಾಹನ ಚಾಲನೆಯಂತಹ ಅವಕಾಶಗಳು ಮಹಿಳೆಯರಿಗೆ ಸಾಕಷ್ಟಿವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ಸಾಂಕೇತಿಕವಾಗಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುಳಾ, ಜಿಲ್ಲಾ ವ್ಯವಸ್ಥಾಪಕರಾದ ಅಶೋಕ್‌, ವಾಹನ ಚಾಲನಾ ತರಬೇತಿಯ ತರಬೇತುದಾರರಾದ ಮಂಜೇಶ್‌, ರಶ್ಮಿ ಮತ್ತು ಸಹಾಯಕರು, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಮತ್ತು ವಿದ್ಯಾ ಹೊಸಮನಿ ಸೇರಿದಂತೆ ರುಡ್‌ಸೆಟ್‌ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಲಘು ವಾಹನ ಚಾಲನಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago