ಮಹಿಳೆಯರ ಸಶಕ್ತೀಕರಣಕ್ಕೆ ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯ: ಜಿ.ಪಂ. ಯೋಜನಾ ನಿರ್ದೇಶಕ ವಿಠ್ಠಲ್‌ ಕಾವಳೆ

ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್‌ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿಣಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಗೆ ಆಯ್ಕೆಯಾದ ಮಹಿಳಾ ಫಲಾನುಭವಿಗಳಿಗೆ ಹಮ್ಮಿಕೊಳ್ಳಲಾಗಿದ್ದ 30 ದಿನಗಳ ಉಚಿತ ಲಘು ವಾಹನ ಚಾಲನಾ ತರಬೇತಿಯ ಸಮಾರೋಪ‌ ಸಮಾರಂಭವನ್ನು ಉದ್ದೇಶಿಸಿ, ಅವರು ಮಾತನಾಡಿದರು.

ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುವುದು ಮಾತ್ರವಲ್ಲದೇ, ಬ್ಯಾಂಕಿನಲ್ಲಿ ಸಾಲ ಪಡೆದು, ಸ್ವ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗಬೇಕು ಹಾಗೂ ಪ್ರತಿ ಗ್ರಾಮ ಪಂಚಾಯಿತಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದ ವಾಹನ ಚಾಲನೆ ಮಾತ್ರವಲ್ಲದೇ, ಪ್ರವಾಸೋದ್ಯಮ ಚಟುವಟಿಕೆಗಳಿಗೂ ವಾಹನ ಚಾಲನೆಯ ಕೌಶಲ್ಯವನ್ನು ಬಳಸಿಕೊಳ್ಳಬಹುದು ಎಂದರು.

ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸ್ಚಚ್ಛತಾ ವಾಹಿನಿಯ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ, ಸಂಸ್ಥೆಯಲ್ಲಿ ಪಡೆದ ಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರಲ್ಲದೆ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಲವಾರು ಕೆಲಸಗಳನ್ನು ಒಟ್ಟಿಗೆ ನಿಭಾಯಿಸುವ ಅನನ್ಯ ಶಕ್ತಿ ಕೇವಲ ಮಹಿಳೆಯರಿಗೆ ಮಾತ್ರ ಇರುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ಜೆ. ಆನಂದ್‌ ಅವರು, ಬೆಂಗಳೂರು ನಗರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸಮೀಪವಿರುವುದರಿಂದ ತರಕಾರಿಗಳಂತಹ ದಿನನಿತ್ಯದ ವಸ್ತುಗಳು, ಆಹಾರೋತ್ಪನ್ನಗಳು ಸೇರಿದಂತೆ ಸರಕು ಸಾಗಾಣಿಕೆಗೆ ವಿಫುಲ ಅವಕಾಶಗಳಿವೆ ಹಾಗೂ ಬೆಂಗಳೂರು ಅಂತರರಾಷ್ಟೃೀಯ ವಿಮಾನ ನಿಲ್ದಾಣವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ನೆಲೆಗೊಂಡಿರುವುದರಿಂದ ವಾಹನ ಚಾಲನೆಯಂತಹ ಅವಕಾಶಗಳು ಮಹಿಳೆಯರಿಗೆ ಸಾಕಷ್ಟಿವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ವಿಠ್ಠಲ್‌ ಕಾವಳೆ ಅವರು ಸಾಂಕೇತಿಕವಾಗಿ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುಳಾ, ಜಿಲ್ಲಾ ವ್ಯವಸ್ಥಾಪಕರಾದ ಅಶೋಕ್‌, ವಾಹನ ಚಾಲನಾ ತರಬೇತಿಯ ತರಬೇತುದಾರರಾದ ಮಂಜೇಶ್‌, ರಶ್ಮಿ ಮತ್ತು ಸಹಾಯಕರು, ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಮತ್ತು ವಿದ್ಯಾ ಹೊಸಮನಿ ಸೇರಿದಂತೆ ರುಡ್‌ಸೆಟ್‌ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಲಘು ವಾಹನ ಚಾಲನಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago