ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ: ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ಎಫ್ ಐಆರ್

ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಸಂಬಂಧ ‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಾಜ್ಯ ಸರಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.
ನೇತಾಜಿ ನಗರದ ನಿವಾಸಿ ಶಶಿಕಲಾ (38) ಎಂಬುವವರು ನೀಡಿದ ದೂರಿನ ಅನ್ವಯ, ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಪೂರ್ವವಿಭಾಗದ ಡಿಸಿಆರ್‌ಇ ಠಾಣೆಯಲ್ಲಿ ಆ.29ರಂದು ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಅತಿಕ್ರಮ ಪ್ರವೇಶ, ಹಲ್ಲೆ, ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರ್ತೂರು ಹೋಬಳಿ ಕಸವನಹಳ್ಳಿ ಗ್ರಾಮದಲ್ಲಿರುವ 3 ಎಕರೆ 35 ಗುಂಟೆ ಜಮೀನನ್ನು ಭೋಗ್ಯಕ್ಕೆ ಪಡೆದಿರುವ ಶಶಿಕಲಾ ಹಾಗೂ ಕೋದಂಡಚಾರಿ ಎಂಬುವವರು ನರ್ಸರಿ ನಡೆಸುತ್ತಿದ್ದಾರೆ. ‘‘ಕೆಲದಿನಗಳ ಹಿಂದೆ ಜಮೀನಿನ ಬಳಿ ಕಾರಿನಲ್ಲಿ ಆಗಮಿಸಿದ್ದ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಹಾಗೂ ಇತರರು ಅವಾಚ್ಯ ಶಬ್ಧಗಳಿಂದ ಜಾತಿನಿಂದನೆ ಮಾಡಿದ್ದಾರೆ. ಜತೆಗೆ, ದೇಹದ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿದ್ದಾರೆ. ಜಮೀನು ಸ್ಥಳ ಬಿಟ್ಟುಕೊಡದಿದ್ದರೆ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದಾರೆ’’ ಎಂದು ಶಶಿಕಲಾ ದೂರಿನಲ್ಲಿಆರೋಪಿಸಿದ್ದಾರೆ.

ಸ್ಥಳೀಯ ಪೊಲೀಸರ ನಿರ್ಲಕ್ಷ್ಯ ಆರೋಪ..!

ಸಂತ್ರಸ್ತೆ ಶಶಿಕಲಾ ಅವರು ಮೊದಲು ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಲು ತೆರಳಿದ್ದು ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಹಲವು ಬಾರಿ ದೂರು ನೀಡಿದರೂ ಸಬೂಬು ಹೇಳಿದ್ದಾರೆ.ಈ ನಿಟ್ಟಿನಲ್ಲಿ  ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯಿದೆ ಪ್ರಕರಣಗಳ ತನಿಖೆ ಸಲುವಾಗಿಯೇ ಸ್ಥಾಪಿಸಲಾಗಿರುವ ಡಿಸಿಆರ್‌ಇ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ಕಂಡು ಬಂದಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗುವುದು ಎಂದು ಡಿಸಿಆರ್‌ಇ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು

Ramesh Babu

Journalist

Recent Posts

ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮ

ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…

13 hours ago

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…

14 hours ago

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…

18 hours ago

ತಂದೆಯಿಂದಲೇ 6 ವರ್ಷದ ಮಗನ ಕೊಲೆ: ಕಾರಣ ಏನು ಗೊತ್ತಾ….?

ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.‌ ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…

18 hours ago

ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…

21 hours ago

ಮನೆಯಲ್ಲಿ ವ್ಯಕ್ತಿ ನೇಣಿಗೆ ಶರಣು

ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…

24 hours ago