ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ: ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ಎಫ್ ಐಆರ್

ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಸಂಬಂಧ ‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಾಜ್ಯ ಸರಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.
ನೇತಾಜಿ ನಗರದ ನಿವಾಸಿ ಶಶಿಕಲಾ (38) ಎಂಬುವವರು ನೀಡಿದ ದೂರಿನ ಅನ್ವಯ, ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಪೂರ್ವವಿಭಾಗದ ಡಿಸಿಆರ್‌ಇ ಠಾಣೆಯಲ್ಲಿ ಆ.29ರಂದು ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಅತಿಕ್ರಮ ಪ್ರವೇಶ, ಹಲ್ಲೆ, ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರ್ತೂರು ಹೋಬಳಿ ಕಸವನಹಳ್ಳಿ ಗ್ರಾಮದಲ್ಲಿರುವ 3 ಎಕರೆ 35 ಗುಂಟೆ ಜಮೀನನ್ನು ಭೋಗ್ಯಕ್ಕೆ ಪಡೆದಿರುವ ಶಶಿಕಲಾ ಹಾಗೂ ಕೋದಂಡಚಾರಿ ಎಂಬುವವರು ನರ್ಸರಿ ನಡೆಸುತ್ತಿದ್ದಾರೆ. ‘‘ಕೆಲದಿನಗಳ ಹಿಂದೆ ಜಮೀನಿನ ಬಳಿ ಕಾರಿನಲ್ಲಿ ಆಗಮಿಸಿದ್ದ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಹಾಗೂ ಇತರರು ಅವಾಚ್ಯ ಶಬ್ಧಗಳಿಂದ ಜಾತಿನಿಂದನೆ ಮಾಡಿದ್ದಾರೆ. ಜತೆಗೆ, ದೇಹದ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿದ್ದಾರೆ. ಜಮೀನು ಸ್ಥಳ ಬಿಟ್ಟುಕೊಡದಿದ್ದರೆ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದಾರೆ’’ ಎಂದು ಶಶಿಕಲಾ ದೂರಿನಲ್ಲಿಆರೋಪಿಸಿದ್ದಾರೆ.

ಸ್ಥಳೀಯ ಪೊಲೀಸರ ನಿರ್ಲಕ್ಷ್ಯ ಆರೋಪ..!

ಸಂತ್ರಸ್ತೆ ಶಶಿಕಲಾ ಅವರು ಮೊದಲು ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಲು ತೆರಳಿದ್ದು ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಹಲವು ಬಾರಿ ದೂರು ನೀಡಿದರೂ ಸಬೂಬು ಹೇಳಿದ್ದಾರೆ.ಈ ನಿಟ್ಟಿನಲ್ಲಿ  ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯಿದೆ ಪ್ರಕರಣಗಳ ತನಿಖೆ ಸಲುವಾಗಿಯೇ ಸ್ಥಾಪಿಸಲಾಗಿರುವ ಡಿಸಿಆರ್‌ಇ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ಕಂಡು ಬಂದಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗುವುದು ಎಂದು ಡಿಸಿಆರ್‌ಇ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

11 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

21 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

21 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago