ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಸಂಬಂಧ ‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್ಇ) ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಜ್ಯ ಸರಕಾರ ಡಿಸಿಆರ್ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.
ನೇತಾಜಿ ನಗರದ ನಿವಾಸಿ ಶಶಿಕಲಾ (38) ಎಂಬುವವರು ನೀಡಿದ ದೂರಿನ ಅನ್ವಯ, ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಪೂರ್ವವಿಭಾಗದ ಡಿಸಿಆರ್ಇ ಠಾಣೆಯಲ್ಲಿ ಆ.29ರಂದು ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಅತಿಕ್ರಮ ಪ್ರವೇಶ, ಹಲ್ಲೆ, ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರ್ತೂರು ಹೋಬಳಿ ಕಸವನಹಳ್ಳಿ ಗ್ರಾಮದಲ್ಲಿರುವ 3 ಎಕರೆ 35 ಗುಂಟೆ ಜಮೀನನ್ನು ಭೋಗ್ಯಕ್ಕೆ ಪಡೆದಿರುವ ಶಶಿಕಲಾ ಹಾಗೂ ಕೋದಂಡಚಾರಿ ಎಂಬುವವರು ನರ್ಸರಿ ನಡೆಸುತ್ತಿದ್ದಾರೆ. ‘‘ಕೆಲದಿನಗಳ ಹಿಂದೆ ಜಮೀನಿನ ಬಳಿ ಕಾರಿನಲ್ಲಿ ಆಗಮಿಸಿದ್ದ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಹಾಗೂ ಇತರರು ಅವಾಚ್ಯ ಶಬ್ಧಗಳಿಂದ ಜಾತಿನಿಂದನೆ ಮಾಡಿದ್ದಾರೆ. ಜತೆಗೆ, ದೇಹದ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿದ್ದಾರೆ. ಜಮೀನು ಸ್ಥಳ ಬಿಟ್ಟುಕೊಡದಿದ್ದರೆ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದಾರೆ’’ ಎಂದು ಶಶಿಕಲಾ ದೂರಿನಲ್ಲಿಆರೋಪಿಸಿದ್ದಾರೆ.
ಸ್ಥಳೀಯ ಪೊಲೀಸರ ನಿರ್ಲಕ್ಷ್ಯ ಆರೋಪ..!
ಸಂತ್ರಸ್ತೆ ಶಶಿಕಲಾ ಅವರು ಮೊದಲು ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಲು ತೆರಳಿದ್ದು ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಹಲವು ಬಾರಿ ದೂರು ನೀಡಿದರೂ ಸಬೂಬು ಹೇಳಿದ್ದಾರೆ.ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯಿದೆ ಪ್ರಕರಣಗಳ ತನಿಖೆ ಸಲುವಾಗಿಯೇ ಸ್ಥಾಪಿಸಲಾಗಿರುವ ಡಿಸಿಆರ್ಇ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ಕಂಡು ಬಂದಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗುವುದು ಎಂದು ಡಿಸಿಆರ್ಇ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…