ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ: ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ಎಫ್ ಐಆರ್

ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಸಂಬಂಧ ‘ದಿಯಾ’ಸಿನಿಮಾದ ನಿರ್ಮಾಪಕ ಕೃಷ್ಣಚೈತನ್ಯ ವಿರುದ್ಧ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಾಜ್ಯ ಸರಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.
ನೇತಾಜಿ ನಗರದ ನಿವಾಸಿ ಶಶಿಕಲಾ (38) ಎಂಬುವವರು ನೀಡಿದ ದೂರಿನ ಅನ್ವಯ, ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಪೂರ್ವವಿಭಾಗದ ಡಿಸಿಆರ್‌ಇ ಠಾಣೆಯಲ್ಲಿ ಆ.29ರಂದು ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಅತಿಕ್ರಮ ಪ್ರವೇಶ, ಹಲ್ಲೆ, ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರ್ತೂರು ಹೋಬಳಿ ಕಸವನಹಳ್ಳಿ ಗ್ರಾಮದಲ್ಲಿರುವ 3 ಎಕರೆ 35 ಗುಂಟೆ ಜಮೀನನ್ನು ಭೋಗ್ಯಕ್ಕೆ ಪಡೆದಿರುವ ಶಶಿಕಲಾ ಹಾಗೂ ಕೋದಂಡಚಾರಿ ಎಂಬುವವರು ನರ್ಸರಿ ನಡೆಸುತ್ತಿದ್ದಾರೆ. ‘‘ಕೆಲದಿನಗಳ ಹಿಂದೆ ಜಮೀನಿನ ಬಳಿ ಕಾರಿನಲ್ಲಿ ಆಗಮಿಸಿದ್ದ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಹಾಗೂ ಇತರರು ಅವಾಚ್ಯ ಶಬ್ಧಗಳಿಂದ ಜಾತಿನಿಂದನೆ ಮಾಡಿದ್ದಾರೆ. ಜತೆಗೆ, ದೇಹದ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿದ್ದಾರೆ. ಜಮೀನು ಸ್ಥಳ ಬಿಟ್ಟುಕೊಡದಿದ್ದರೆ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದಾರೆ’’ ಎಂದು ಶಶಿಕಲಾ ದೂರಿನಲ್ಲಿಆರೋಪಿಸಿದ್ದಾರೆ.

ಸ್ಥಳೀಯ ಪೊಲೀಸರ ನಿರ್ಲಕ್ಷ್ಯ ಆರೋಪ..!

ಸಂತ್ರಸ್ತೆ ಶಶಿಕಲಾ ಅವರು ಮೊದಲು ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಲು ತೆರಳಿದ್ದು ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ. ಹಲವು ಬಾರಿ ದೂರು ನೀಡಿದರೂ ಸಬೂಬು ಹೇಳಿದ್ದಾರೆ.ಈ ನಿಟ್ಟಿನಲ್ಲಿ  ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯಿದೆ ಪ್ರಕರಣಗಳ ತನಿಖೆ ಸಲುವಾಗಿಯೇ ಸ್ಥಾಪಿಸಲಾಗಿರುವ ಡಿಸಿಆರ್‌ಇ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ಕಂಡು ಬಂದಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗುವುದು ಎಂದು ಡಿಸಿಆರ್‌ಇ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

2 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

16 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

17 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

18 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

18 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

22 hours ago