ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಎಗರಿಸಿ ಕಳ್ಳರು ಪರಾರಿ

ದೊಡ್ಡಬಳ್ಳಾಪುರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಚೈನ್ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ದಂಪತಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ 45 ಗ್ರಾಂ. ತೂಕದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿರುವ ಘಟನೆ ಮಾರಸಂದ್ರ ಅಪಾರ್ಟ್ಮೆಂಟ್ ಬಳಿ ನಡೆದಿದೆ.

ದೊಡ್ಡಬಳ್ಳಾಪುರ ನಗರದ ಕಲ್ಲುಪೇಟೆ ನಿವಾಸಿಗಳಾದ ರಮೇಶ್ ದಂಪತಿ ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮಧ್ಯಾಹ್ನ ರಾಜಾನುಕುಂಟೆ ಬಳಿ ಆಸ್ಪತ್ರೆಗೆ ತೋರಿಸಿ ವಾಪಾಸ್ ದೊಡ್ಡಬಳ್ಳಾಪುರದ ಕಡೆ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಇಬ್ಬರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸಿಕೊಂಡು ದಂಪತಿ ಬೈಕ್ ಹಿಂಬಾಲಿಸಿಕೊಂಡು ಬಂದು ರೈಡಿಂಗ್ನಲ್ಲಿದ್ದಂತೆ ಹಿಂಬದಿ ಕುಳಿತಿದ್ದ ಮಹಿಳೆಯ ಕೊರಳಲ್ಲಲಿದ್ದ ಚಿನ್ನದ ಸರಕ್ಕೆ ಕೈಹಾಕಿ ಎಳೆದು ದೊಡ್ಡಬಳ್ಳಾಪುರದ ಕಡೆಗೆ ಪರಾರಿಯಾಗಿದ್ದಾರೆ.

ಸುಮಾರು 5 ಲಕ್ಷ ಬೆಲೆ ಬಾಳುವ 45 ಗ್ರಾಂ. ತೂಕದ ಚಿನ್ನದ ಸರ ಕಳೆದುಕೊಂಡ ದಂಪತಿ ದಿಕ್ಕು ತೋಚದೆ ಘಟನೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ramesh Babu

Journalist

Recent Posts

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

4 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

15 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

15 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

19 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

23 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

1 day ago