ದೊಡ್ಡಬಳ್ಳಾಪುರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಚೈನ್ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ದಂಪತಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ 45 ಗ್ರಾಂ. ತೂಕದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿರುವ ಘಟನೆ ಮಾರಸಂದ್ರ ಅಪಾರ್ಟ್ಮೆಂಟ್ ಬಳಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಕಲ್ಲುಪೇಟೆ ನಿವಾಸಿಗಳಾದ ರಮೇಶ್ ದಂಪತಿ ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮಧ್ಯಾಹ್ನ ರಾಜಾನುಕುಂಟೆ ಬಳಿ ಆಸ್ಪತ್ರೆಗೆ ತೋರಿಸಿ ವಾಪಾಸ್ ದೊಡ್ಡಬಳ್ಳಾಪುರದ ಕಡೆ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಇಬ್ಬರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸಿಕೊಂಡು ದಂಪತಿ ಬೈಕ್ ಹಿಂಬಾಲಿಸಿಕೊಂಡು ಬಂದು ರೈಡಿಂಗ್ನಲ್ಲಿದ್ದಂತೆ ಹಿಂಬದಿ ಕುಳಿತಿದ್ದ ಮಹಿಳೆಯ ಕೊರಳಲ್ಲಲಿದ್ದ ಚಿನ್ನದ ಸರಕ್ಕೆ ಕೈಹಾಕಿ ಎಳೆದು ದೊಡ್ಡಬಳ್ಳಾಪುರದ ಕಡೆಗೆ ಪರಾರಿಯಾಗಿದ್ದಾರೆ.
ಸುಮಾರು 5 ಲಕ್ಷ ಬೆಲೆ ಬಾಳುವ 45 ಗ್ರಾಂ. ತೂಕದ ಚಿನ್ನದ ಸರ ಕಳೆದುಕೊಂಡ ದಂಪತಿ ದಿಕ್ಕು ತೋಚದೆ ಘಟನೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…