ದೊಡ್ಡಬಳ್ಳಾಪುರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಚೈನ್ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ದಂಪತಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ 45 ಗ್ರಾಂ. ತೂಕದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿರುವ ಘಟನೆ ಮಾರಸಂದ್ರ ಅಪಾರ್ಟ್ಮೆಂಟ್ ಬಳಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಕಲ್ಲುಪೇಟೆ ನಿವಾಸಿಗಳಾದ ರಮೇಶ್ ದಂಪತಿ ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮಧ್ಯಾಹ್ನ ರಾಜಾನುಕುಂಟೆ ಬಳಿ ಆಸ್ಪತ್ರೆಗೆ ತೋರಿಸಿ ವಾಪಾಸ್ ದೊಡ್ಡಬಳ್ಳಾಪುರದ ಕಡೆ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಇಬ್ಬರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸಿಕೊಂಡು ದಂಪತಿ ಬೈಕ್ ಹಿಂಬಾಲಿಸಿಕೊಂಡು ಬಂದು ರೈಡಿಂಗ್ನಲ್ಲಿದ್ದಂತೆ ಹಿಂಬದಿ ಕುಳಿತಿದ್ದ ಮಹಿಳೆಯ ಕೊರಳಲ್ಲಲಿದ್ದ ಚಿನ್ನದ ಸರಕ್ಕೆ ಕೈಹಾಕಿ ಎಳೆದು ದೊಡ್ಡಬಳ್ಳಾಪುರದ ಕಡೆಗೆ ಪರಾರಿಯಾಗಿದ್ದಾರೆ.
ಸುಮಾರು 5 ಲಕ್ಷ ಬೆಲೆ ಬಾಳುವ 45 ಗ್ರಾಂ. ತೂಕದ ಚಿನ್ನದ ಸರ ಕಳೆದುಕೊಂಡ ದಂಪತಿ ದಿಕ್ಕು ತೋಚದೆ ಘಟನೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…