ದೊಡ್ಡಬಳ್ಳಾಪುರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಚೈನ್ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ದಂಪತಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ 45 ಗ್ರಾಂ. ತೂಕದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿರುವ ಘಟನೆ ಮಾರಸಂದ್ರ ಅಪಾರ್ಟ್ಮೆಂಟ್ ಬಳಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಕಲ್ಲುಪೇಟೆ ನಿವಾಸಿಗಳಾದ ರಮೇಶ್ ದಂಪತಿ ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮಧ್ಯಾಹ್ನ ರಾಜಾನುಕುಂಟೆ ಬಳಿ ಆಸ್ಪತ್ರೆಗೆ ತೋರಿಸಿ ವಾಪಾಸ್ ದೊಡ್ಡಬಳ್ಳಾಪುರದ ಕಡೆ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಇಬ್ಬರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸಿಕೊಂಡು ದಂಪತಿ ಬೈಕ್ ಹಿಂಬಾಲಿಸಿಕೊಂಡು ಬಂದು ರೈಡಿಂಗ್ನಲ್ಲಿದ್ದಂತೆ ಹಿಂಬದಿ ಕುಳಿತಿದ್ದ ಮಹಿಳೆಯ ಕೊರಳಲ್ಲಲಿದ್ದ ಚಿನ್ನದ ಸರಕ್ಕೆ ಕೈಹಾಕಿ ಎಳೆದು ದೊಡ್ಡಬಳ್ಳಾಪುರದ ಕಡೆಗೆ ಪರಾರಿಯಾಗಿದ್ದಾರೆ.
ಸುಮಾರು 5 ಲಕ್ಷ ಬೆಲೆ ಬಾಳುವ 45 ಗ್ರಾಂ. ತೂಕದ ಚಿನ್ನದ ಸರ ಕಳೆದುಕೊಂಡ ದಂಪತಿ ದಿಕ್ಕು ತೋಚದೆ ಘಟನೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…