ದೊಡ್ಡಬಳ್ಳಾಪುರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಚೈನ್ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ದಂಪತಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ 45 ಗ್ರಾಂ. ತೂಕದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿರುವ ಘಟನೆ ಮಾರಸಂದ್ರ ಅಪಾರ್ಟ್ಮೆಂಟ್ ಬಳಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಕಲ್ಲುಪೇಟೆ ನಿವಾಸಿಗಳಾದ ರಮೇಶ್ ದಂಪತಿ ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮಧ್ಯಾಹ್ನ ರಾಜಾನುಕುಂಟೆ ಬಳಿ ಆಸ್ಪತ್ರೆಗೆ ತೋರಿಸಿ ವಾಪಾಸ್ ದೊಡ್ಡಬಳ್ಳಾಪುರದ ಕಡೆ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಇಬ್ಬರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಗೂ ಹೆಲ್ಮೆಟ್ ಧರಿಸಿಕೊಂಡು ದಂಪತಿ ಬೈಕ್ ಹಿಂಬಾಲಿಸಿಕೊಂಡು ಬಂದು ರೈಡಿಂಗ್ನಲ್ಲಿದ್ದಂತೆ ಹಿಂಬದಿ ಕುಳಿತಿದ್ದ ಮಹಿಳೆಯ ಕೊರಳಲ್ಲಲಿದ್ದ ಚಿನ್ನದ ಸರಕ್ಕೆ ಕೈಹಾಕಿ ಎಳೆದು ದೊಡ್ಡಬಳ್ಳಾಪುರದ ಕಡೆಗೆ ಪರಾರಿಯಾಗಿದ್ದಾರೆ.
ಸುಮಾರು 5 ಲಕ್ಷ ಬೆಲೆ ಬಾಳುವ 45 ಗ್ರಾಂ. ತೂಕದ ಚಿನ್ನದ ಸರ ಕಳೆದುಕೊಂಡ ದಂಪತಿ ದಿಕ್ಕು ತೋಚದೆ ಘಟನೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…