ದೊಡ್ಡಬಳ್ಳಾಪುರ: ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ದೊಡ್ಡಬಳ್ಳಾಪುರ ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ.
ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬುವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 4 ರಿಂದ 5 ಕೆ.ಜಿಯಷ್ಟು ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸ್ತ್ರಿರೋಗ ತಜ್ಞರಾದ ಡಾ.ಅರ್ಚನಾ ಕೆ.ಎಲ್ ನೇತೃತ್ವದ ವೈದ್ಯರ ತಂಡ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದೆ.
ವೈದ್ಯೆ ಡಾ.ಅರ್ಚನಾ ಕೆ.ಎಲ್ ಮಾತನಾಡಿ ಸಾಮಾನ್ಯವಾಗಿ ಮಹಿಳೆಯರ ಗರ್ಭಕೋಶ, ಅಂಡಾಶಯಗಳಲ್ಲಿ ಗಡ್ಡೆಯು 100ಕ್ಕೆ 10 ಮಂದಿಯಲ್ಲಿ ಸಣ್ಣಪುಟ್ಟದಾಗಿ ಕಂಡುಬರುತ್ತದೆ. ಆದರೆ, ಅಚ್ಚರಿ ಎಂಬಂತೆ ಈ ಮಹಿಳೆಯ ಹೊಟ್ಟೆಯಲ್ಲಿ 4 ರಿಂದ 5 ಕೆಜಿ ಗಡ್ಡೆ ಪತ್ತೆಯಾಗಿದೆ. ಮಹಿಳೆ ಒಂದೆರಡು ದಿನ ತಡವಾಗಿ ಬಂದಿದ್ದರೆ ಆಕೆಯ ಜೀವಕ್ಕೆ ಹಾನಿಯಾಗುತ್ತಿತ್ತು. ಸದ್ಯ ಗರ್ಭಕೋಶದಲ್ಲಿ ಬೆಳೆದಿದ್ದ ದೊಡ್ಡ ಗಾತ್ರದ ಗಡ್ಡೆ ಹೊರತೆಗೆದಿದ್ದು, ಮಹಿಳೆ ಆರೋಗ್ಯವಾಗಿದ್ದಾರೆ ಎಂದರು.
ಶಸ್ತ್ರಚಿಕತ್ಸೆಯ ತಂಡದ ಭಾಗವಾಗಿದ್ದ ಡಾ.ಪ್ರೇಮಲತಾ ಮಾತನಾಡಿ ಇದೊಂದು ಗಂಭೀರ ಮತ್ತು ವೈದ್ಯರಿಗೆ ಸವಾಲಾದ ಪ್ರಕರಣವಾಗಿತ್ತು. ಅನಸ್ತೇಶಿಯಾ ನೀಡುವ ಮುನ್ನಾ ರಕ್ತದೊತ್ತಡ, ಉಸಿರಾಟದ ಸಮಸ್ಯೆ ನಿಯಂತ್ರಣಕ್ಕೆ ಪಡೆದು ಬಳಿಕ ಆಪರೇಷನ್ ಆರಂಭಿಸಿದೆವು. ರಕ್ತದ ಅಗತ್ಯತೆ ಹೆಚ್ಚು ಇದ್ದಿದ್ದರಿಂದ ಮುಂಚಿತವಾಗಿಯೇ 4 ಬಾಟಲ್ ಗಳಷ್ಟು ರಕ್ತವನ್ನು ತರೆಸಿಕೊಂಡಿದ್ದೆವು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಯಿತು ಎಂದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…