ದೊಡ್ಡಬಳ್ಳಾಪುರ: ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ದೊಡ್ಡಬಳ್ಳಾಪುರ ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ.
ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬುವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 4 ರಿಂದ 5 ಕೆ.ಜಿಯಷ್ಟು ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸ್ತ್ರಿರೋಗ ತಜ್ಞರಾದ ಡಾ.ಅರ್ಚನಾ ಕೆ.ಎಲ್ ನೇತೃತ್ವದ ವೈದ್ಯರ ತಂಡ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದೆ.
ವೈದ್ಯೆ ಡಾ.ಅರ್ಚನಾ ಕೆ.ಎಲ್ ಮಾತನಾಡಿ ಸಾಮಾನ್ಯವಾಗಿ ಮಹಿಳೆಯರ ಗರ್ಭಕೋಶ, ಅಂಡಾಶಯಗಳಲ್ಲಿ ಗಡ್ಡೆಯು 100ಕ್ಕೆ 10 ಮಂದಿಯಲ್ಲಿ ಸಣ್ಣಪುಟ್ಟದಾಗಿ ಕಂಡುಬರುತ್ತದೆ. ಆದರೆ, ಅಚ್ಚರಿ ಎಂಬಂತೆ ಈ ಮಹಿಳೆಯ ಹೊಟ್ಟೆಯಲ್ಲಿ 4 ರಿಂದ 5 ಕೆಜಿ ಗಡ್ಡೆ ಪತ್ತೆಯಾಗಿದೆ. ಮಹಿಳೆ ಒಂದೆರಡು ದಿನ ತಡವಾಗಿ ಬಂದಿದ್ದರೆ ಆಕೆಯ ಜೀವಕ್ಕೆ ಹಾನಿಯಾಗುತ್ತಿತ್ತು. ಸದ್ಯ ಗರ್ಭಕೋಶದಲ್ಲಿ ಬೆಳೆದಿದ್ದ ದೊಡ್ಡ ಗಾತ್ರದ ಗಡ್ಡೆ ಹೊರತೆಗೆದಿದ್ದು, ಮಹಿಳೆ ಆರೋಗ್ಯವಾಗಿದ್ದಾರೆ ಎಂದರು.
ಶಸ್ತ್ರಚಿಕತ್ಸೆಯ ತಂಡದ ಭಾಗವಾಗಿದ್ದ ಡಾ.ಪ್ರೇಮಲತಾ ಮಾತನಾಡಿ ಇದೊಂದು ಗಂಭೀರ ಮತ್ತು ವೈದ್ಯರಿಗೆ ಸವಾಲಾದ ಪ್ರಕರಣವಾಗಿತ್ತು. ಅನಸ್ತೇಶಿಯಾ ನೀಡುವ ಮುನ್ನಾ ರಕ್ತದೊತ್ತಡ, ಉಸಿರಾಟದ ಸಮಸ್ಯೆ ನಿಯಂತ್ರಣಕ್ಕೆ ಪಡೆದು ಬಳಿಕ ಆಪರೇಷನ್ ಆರಂಭಿಸಿದೆವು. ರಕ್ತದ ಅಗತ್ಯತೆ ಹೆಚ್ಚು ಇದ್ದಿದ್ದರಿಂದ ಮುಂಚಿತವಾಗಿಯೇ 4 ಬಾಟಲ್ ಗಳಷ್ಟು ರಕ್ತವನ್ನು ತರೆಸಿಕೊಂಡಿದ್ದೆವು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಯಿತು ಎಂದರು.
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…