ದೊಡ್ಡಬಳ್ಳಾಪುರ: ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ದೊಡ್ಡಬಳ್ಳಾಪುರ ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ.
ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬುವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 4 ರಿಂದ 5 ಕೆ.ಜಿಯಷ್ಟು ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸ್ತ್ರಿರೋಗ ತಜ್ಞರಾದ ಡಾ.ಅರ್ಚನಾ ಕೆ.ಎಲ್ ನೇತೃತ್ವದ ವೈದ್ಯರ ತಂಡ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದೆ.
ವೈದ್ಯೆ ಡಾ.ಅರ್ಚನಾ ಕೆ.ಎಲ್ ಮಾತನಾಡಿ ಸಾಮಾನ್ಯವಾಗಿ ಮಹಿಳೆಯರ ಗರ್ಭಕೋಶ, ಅಂಡಾಶಯಗಳಲ್ಲಿ ಗಡ್ಡೆಯು 100ಕ್ಕೆ 10 ಮಂದಿಯಲ್ಲಿ ಸಣ್ಣಪುಟ್ಟದಾಗಿ ಕಂಡುಬರುತ್ತದೆ. ಆದರೆ, ಅಚ್ಚರಿ ಎಂಬಂತೆ ಈ ಮಹಿಳೆಯ ಹೊಟ್ಟೆಯಲ್ಲಿ 4 ರಿಂದ 5 ಕೆಜಿ ಗಡ್ಡೆ ಪತ್ತೆಯಾಗಿದೆ. ಮಹಿಳೆ ಒಂದೆರಡು ದಿನ ತಡವಾಗಿ ಬಂದಿದ್ದರೆ ಆಕೆಯ ಜೀವಕ್ಕೆ ಹಾನಿಯಾಗುತ್ತಿತ್ತು. ಸದ್ಯ ಗರ್ಭಕೋಶದಲ್ಲಿ ಬೆಳೆದಿದ್ದ ದೊಡ್ಡ ಗಾತ್ರದ ಗಡ್ಡೆ ಹೊರತೆಗೆದಿದ್ದು, ಮಹಿಳೆ ಆರೋಗ್ಯವಾಗಿದ್ದಾರೆ ಎಂದರು.
ಶಸ್ತ್ರಚಿಕತ್ಸೆಯ ತಂಡದ ಭಾಗವಾಗಿದ್ದ ಡಾ.ಪ್ರೇಮಲತಾ ಮಾತನಾಡಿ ಇದೊಂದು ಗಂಭೀರ ಮತ್ತು ವೈದ್ಯರಿಗೆ ಸವಾಲಾದ ಪ್ರಕರಣವಾಗಿತ್ತು. ಅನಸ್ತೇಶಿಯಾ ನೀಡುವ ಮುನ್ನಾ ರಕ್ತದೊತ್ತಡ, ಉಸಿರಾಟದ ಸಮಸ್ಯೆ ನಿಯಂತ್ರಣಕ್ಕೆ ಪಡೆದು ಬಳಿಕ ಆಪರೇಷನ್ ಆರಂಭಿಸಿದೆವು. ರಕ್ತದ ಅಗತ್ಯತೆ ಹೆಚ್ಚು ಇದ್ದಿದ್ದರಿಂದ ಮುಂಚಿತವಾಗಿಯೇ 4 ಬಾಟಲ್ ಗಳಷ್ಟು ರಕ್ತವನ್ನು ತರೆಸಿಕೊಂಡಿದ್ದೆವು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಯಿತು ಎಂದರು.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…