ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ 5 ಕೆ.ಜಿ ಗಡ್ಡೆಯನ್ನ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರ ತಂಡ

ದೊಡ್ಡಬಳ್ಳಾಪುರ: ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ದೊಡ್ಡಬಳ್ಳಾಪುರ ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ.

ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬುವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 4 ರಿಂದ 5 ಕೆ.ಜಿಯಷ್ಟು ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸ್ತ್ರಿರೋಗ ತಜ್ಞರಾದ ಡಾ.ಅರ್ಚನಾ ಕೆ.ಎಲ್ ನೇತೃತ್ವದ ವೈದ್ಯರ ತಂಡ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದೆ.

ವೈದ್ಯೆ ಡಾ.ಅರ್ಚನಾ ಕೆ.ಎಲ್ ಮಾತನಾಡಿ ಸಾಮಾನ್ಯವಾಗಿ ಮಹಿಳೆಯರ ಗರ್ಭಕೋಶ, ಅಂಡಾಶಯಗಳಲ್ಲಿ ಗಡ್ಡೆಯು 100ಕ್ಕೆ 10 ಮಂದಿಯಲ್ಲಿ ಸಣ್ಣಪುಟ್ಟದಾಗಿ ಕಂಡುಬರುತ್ತದೆ. ಆದರೆ, ಅಚ್ಚರಿ ಎಂಬಂತೆ ಈ ಮಹಿಳೆಯ ಹೊಟ್ಟೆಯಲ್ಲಿ 4 ರಿಂದ 5 ಕೆಜಿ ಗಡ್ಡೆ ಪತ್ತೆಯಾಗಿದೆ. ಮಹಿಳೆ ಒಂದೆರಡು ದಿನ ತಡವಾಗಿ ಬಂದಿದ್ದರೆ ಆಕೆಯ ಜೀವಕ್ಕೆ ಹಾನಿಯಾಗುತ್ತಿತ್ತು. ಸದ್ಯ ಗರ್ಭಕೋಶದಲ್ಲಿ ಬೆಳೆದಿದ್ದ ದೊಡ್ಡ ಗಾತ್ರದ ಗಡ್ಡೆ ಹೊರತೆಗೆದಿದ್ದು, ಮಹಿಳೆ ಆರೋಗ್ಯವಾಗಿದ್ದಾರೆ ಎಂದರು.

ಶಸ್ತ್ರಚಿಕತ್ಸೆಯ ತಂಡದ ಭಾಗವಾಗಿದ್ದ ಡಾ.ಪ್ರೇಮಲತಾ ಮಾತನಾಡಿ ಇದೊಂದು ಗಂಭೀರ ಮತ್ತು ವೈದ್ಯರಿಗೆ ಸವಾಲಾದ ಪ್ರಕರಣವಾಗಿತ್ತು. ಅನಸ್ತೇಶಿಯಾ ನೀಡುವ ಮುನ್ನಾ ರಕ್ತದೊತ್ತಡ, ಉಸಿರಾಟದ ಸಮಸ್ಯೆ ನಿಯಂತ್ರಣಕ್ಕೆ ಪಡೆದು ಬಳಿಕ ಆಪರೇಷನ್ ಆರಂಭಿಸಿದೆವು. ರಕ್ತದ ಅಗತ್ಯತೆ ಹೆಚ್ಚು ಇದ್ದಿದ್ದರಿಂದ ಮುಂಚಿತವಾಗಿಯೇ 4 ಬಾಟಲ್ ಗಳಷ್ಟು ರಕ್ತವನ್ನು ತರೆಸಿಕೊಂಡಿದ್ದೆವು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಯಿತು ಎಂದರು.

Ramesh Babu

Journalist

Recent Posts

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

3 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

18 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

22 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

22 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 day ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

1 day ago