ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ 5 ಕೆ.ಜಿ ಗಡ್ಡೆಯನ್ನ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರ ತಂಡ

ದೊಡ್ಡಬಳ್ಳಾಪುರ: ಮಹಿಳೆಯ ಗರ್ಭಕೋಶದಲ್ಲಿ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ದೊಡ್ಡಬಳ್ಳಾಪುರ ತಾಯಿ-ಮಗು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ.

ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಲ್ಪಾ (35) ಎಂಬುವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆಗೆ ಹೊಟ್ಟೆನೋವು, ಸುಸ್ತು ಎಂದು ದಾಖಲಾಗಿದ್ದರು. ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ 4 ರಿಂದ 5 ಕೆ.ಜಿಯಷ್ಟು ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪ್ರಸೂತಿ ಸ್ತ್ರಿರೋಗ ತಜ್ಞರಾದ ಡಾ.ಅರ್ಚನಾ ಕೆ.ಎಲ್ ನೇತೃತ್ವದ ವೈದ್ಯರ ತಂಡ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದೆ.

ವೈದ್ಯೆ ಡಾ.ಅರ್ಚನಾ ಕೆ.ಎಲ್ ಮಾತನಾಡಿ ಸಾಮಾನ್ಯವಾಗಿ ಮಹಿಳೆಯರ ಗರ್ಭಕೋಶ, ಅಂಡಾಶಯಗಳಲ್ಲಿ ಗಡ್ಡೆಯು 100ಕ್ಕೆ 10 ಮಂದಿಯಲ್ಲಿ ಸಣ್ಣಪುಟ್ಟದಾಗಿ ಕಂಡುಬರುತ್ತದೆ. ಆದರೆ, ಅಚ್ಚರಿ ಎಂಬಂತೆ ಈ ಮಹಿಳೆಯ ಹೊಟ್ಟೆಯಲ್ಲಿ 4 ರಿಂದ 5 ಕೆಜಿ ಗಡ್ಡೆ ಪತ್ತೆಯಾಗಿದೆ. ಮಹಿಳೆ ಒಂದೆರಡು ದಿನ ತಡವಾಗಿ ಬಂದಿದ್ದರೆ ಆಕೆಯ ಜೀವಕ್ಕೆ ಹಾನಿಯಾಗುತ್ತಿತ್ತು. ಸದ್ಯ ಗರ್ಭಕೋಶದಲ್ಲಿ ಬೆಳೆದಿದ್ದ ದೊಡ್ಡ ಗಾತ್ರದ ಗಡ್ಡೆ ಹೊರತೆಗೆದಿದ್ದು, ಮಹಿಳೆ ಆರೋಗ್ಯವಾಗಿದ್ದಾರೆ ಎಂದರು.

ಶಸ್ತ್ರಚಿಕತ್ಸೆಯ ತಂಡದ ಭಾಗವಾಗಿದ್ದ ಡಾ.ಪ್ರೇಮಲತಾ ಮಾತನಾಡಿ ಇದೊಂದು ಗಂಭೀರ ಮತ್ತು ವೈದ್ಯರಿಗೆ ಸವಾಲಾದ ಪ್ರಕರಣವಾಗಿತ್ತು. ಅನಸ್ತೇಶಿಯಾ ನೀಡುವ ಮುನ್ನಾ ರಕ್ತದೊತ್ತಡ, ಉಸಿರಾಟದ ಸಮಸ್ಯೆ ನಿಯಂತ್ರಣಕ್ಕೆ ಪಡೆದು ಬಳಿಕ ಆಪರೇಷನ್ ಆರಂಭಿಸಿದೆವು. ರಕ್ತದ ಅಗತ್ಯತೆ ಹೆಚ್ಚು ಇದ್ದಿದ್ದರಿಂದ ಮುಂಚಿತವಾಗಿಯೇ 4 ಬಾಟಲ್ ಗಳಷ್ಟು ರಕ್ತವನ್ನು ತರೆಸಿಕೊಂಡಿದ್ದೆವು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಯಿತು ಎಂದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

30 minutes ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

9 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

13 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

22 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago