ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಸರಗಳ್ಳ

ತಡರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತೆಗೆದುಕೊಂಡು ಮನಗೆ ಬರುವ ಸಮಯದಲ್ಲಿ, ಮಹಿಳೆಯನ್ನ ಹಿಂಬಾಲಿಸಿ ಬೈಕ್ ನಲ್ಲಿ ಬಂದ ಸರಗಳ್ಳ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದಾನೆ.

ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತಗೆದುಕೊಂಡು ವಾಪಸ್ ಮನೆಗೆ ಬರುವಾಗ ಮಹಿಳೆಯ ಮಾಂಗಲ್ಯಸರ ಸರಗಳ್ಳನ ಪಾಲಾಗಿದೆ

ನಗರದ ಶಾಂತಿನಗರದ ನಿವಾಸಿ ನಿರ್ಮಲ, ತನ್ನನ್ನೇ ಹಿಂಬಾಲಿಸಿ ಕೊಂಡು ಬರುತ್ತಿರುವ ಬೈಕ್ ಸವಾರರನ್ನ ಗಮನಿಸಿದ ಆಕೆ ಸರವನ್ನ ಜೋಪಾನವಾಗಿ ಹಿಡಿದು ಕೊಂಡಿದ್ದಾರೆ, ರಸ್ತೆಯಲ್ಲಿ ಯಾರು ಇಲ್ಲದನ್ನ ಗಮಿಸಿದ ಆತ ಆಕೆಯ ಮಾಂಗಲ್ಯಸರಕ್ಕೆ ಕೈಹಾಕಿದ್ದಾನೆ.

ಮಹಿಳೆ ತನ್ನ ಸರವನ್ನ ಭದ್ರವಾಗಿ ಹಿಡಿದುಕೊಂಡಿದ್ದರಿಂದ ಮೂಕ್ಕಾಲು ಭಾಗದ ಸರ ಕಳ್ಳನ ಕೈ ಸೇರಿದೆ, ಮಾಂಗಲ್ಯಸರ ಎಗರಸಿ ಸರಗಳ್ಳ ಕ್ಷಣದಲ್ಲೇ ಪರಾರಿಯಾಗಿದ್ದಾನೆ, ಒಟ್ಟು ಒಂದು ಲಕ್ಷದ ಐವತ್ತು ಸಾವಿರ ರೂ. ಮೌಲ್ಯದ 38 ಗ್ರಾಂ ತೂಕದ ಮಾಂಗಲ್ಯಸರವಾಗಿದ್ದು , ನಿರ್ಮಲರ ಬಳಿ ಈಗ 12 ಗ್ರಾಂ ಸರ ಮಾತ್ರ ಇದೆ. 26 ಗ್ರಾಂ ಸರ ಕಳ್ಳನ ಪಾಲಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ತಾಲೂಕಿನಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರಗಳ್ಳರ ಎಡೆಮುರಿ ಕಟ್ಟುವಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಬೇಕಿದೆ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

4 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

6 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

15 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

16 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

18 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

23 hours ago