ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಸರಗಳ್ಳ

ತಡರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತೆಗೆದುಕೊಂಡು ಮನಗೆ ಬರುವ ಸಮಯದಲ್ಲಿ, ಮಹಿಳೆಯನ್ನ ಹಿಂಬಾಲಿಸಿ ಬೈಕ್ ನಲ್ಲಿ ಬಂದ ಸರಗಳ್ಳ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದಾನೆ.

ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತಗೆದುಕೊಂಡು ವಾಪಸ್ ಮನೆಗೆ ಬರುವಾಗ ಮಹಿಳೆಯ ಮಾಂಗಲ್ಯಸರ ಸರಗಳ್ಳನ ಪಾಲಾಗಿದೆ

ನಗರದ ಶಾಂತಿನಗರದ ನಿವಾಸಿ ನಿರ್ಮಲ, ತನ್ನನ್ನೇ ಹಿಂಬಾಲಿಸಿ ಕೊಂಡು ಬರುತ್ತಿರುವ ಬೈಕ್ ಸವಾರರನ್ನ ಗಮನಿಸಿದ ಆಕೆ ಸರವನ್ನ ಜೋಪಾನವಾಗಿ ಹಿಡಿದು ಕೊಂಡಿದ್ದಾರೆ, ರಸ್ತೆಯಲ್ಲಿ ಯಾರು ಇಲ್ಲದನ್ನ ಗಮಿಸಿದ ಆತ ಆಕೆಯ ಮಾಂಗಲ್ಯಸರಕ್ಕೆ ಕೈಹಾಕಿದ್ದಾನೆ.

ಮಹಿಳೆ ತನ್ನ ಸರವನ್ನ ಭದ್ರವಾಗಿ ಹಿಡಿದುಕೊಂಡಿದ್ದರಿಂದ ಮೂಕ್ಕಾಲು ಭಾಗದ ಸರ ಕಳ್ಳನ ಕೈ ಸೇರಿದೆ, ಮಾಂಗಲ್ಯಸರ ಎಗರಸಿ ಸರಗಳ್ಳ ಕ್ಷಣದಲ್ಲೇ ಪರಾರಿಯಾಗಿದ್ದಾನೆ, ಒಟ್ಟು ಒಂದು ಲಕ್ಷದ ಐವತ್ತು ಸಾವಿರ ರೂ. ಮೌಲ್ಯದ 38 ಗ್ರಾಂ ತೂಕದ ಮಾಂಗಲ್ಯಸರವಾಗಿದ್ದು , ನಿರ್ಮಲರ ಬಳಿ ಈಗ 12 ಗ್ರಾಂ ಸರ ಮಾತ್ರ ಇದೆ. 26 ಗ್ರಾಂ ಸರ ಕಳ್ಳನ ಪಾಲಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ತಾಲೂಕಿನಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರಗಳ್ಳರ ಎಡೆಮುರಿ ಕಟ್ಟುವಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಬೇಕಿದೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

14 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

16 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

19 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 days ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 days ago