ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಸರಗಳ್ಳ

ತಡರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತೆಗೆದುಕೊಂಡು ಮನಗೆ ಬರುವ ಸಮಯದಲ್ಲಿ, ಮಹಿಳೆಯನ್ನ ಹಿಂಬಾಲಿಸಿ ಬೈಕ್ ನಲ್ಲಿ ಬಂದ ಸರಗಳ್ಳ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದಾನೆ.

ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತಗೆದುಕೊಂಡು ವಾಪಸ್ ಮನೆಗೆ ಬರುವಾಗ ಮಹಿಳೆಯ ಮಾಂಗಲ್ಯಸರ ಸರಗಳ್ಳನ ಪಾಲಾಗಿದೆ

ನಗರದ ಶಾಂತಿನಗರದ ನಿವಾಸಿ ನಿರ್ಮಲ, ತನ್ನನ್ನೇ ಹಿಂಬಾಲಿಸಿ ಕೊಂಡು ಬರುತ್ತಿರುವ ಬೈಕ್ ಸವಾರರನ್ನ ಗಮನಿಸಿದ ಆಕೆ ಸರವನ್ನ ಜೋಪಾನವಾಗಿ ಹಿಡಿದು ಕೊಂಡಿದ್ದಾರೆ, ರಸ್ತೆಯಲ್ಲಿ ಯಾರು ಇಲ್ಲದನ್ನ ಗಮಿಸಿದ ಆತ ಆಕೆಯ ಮಾಂಗಲ್ಯಸರಕ್ಕೆ ಕೈಹಾಕಿದ್ದಾನೆ.

ಮಹಿಳೆ ತನ್ನ ಸರವನ್ನ ಭದ್ರವಾಗಿ ಹಿಡಿದುಕೊಂಡಿದ್ದರಿಂದ ಮೂಕ್ಕಾಲು ಭಾಗದ ಸರ ಕಳ್ಳನ ಕೈ ಸೇರಿದೆ, ಮಾಂಗಲ್ಯಸರ ಎಗರಸಿ ಸರಗಳ್ಳ ಕ್ಷಣದಲ್ಲೇ ಪರಾರಿಯಾಗಿದ್ದಾನೆ, ಒಟ್ಟು ಒಂದು ಲಕ್ಷದ ಐವತ್ತು ಸಾವಿರ ರೂ. ಮೌಲ್ಯದ 38 ಗ್ರಾಂ ತೂಕದ ಮಾಂಗಲ್ಯಸರವಾಗಿದ್ದು , ನಿರ್ಮಲರ ಬಳಿ ಈಗ 12 ಗ್ರಾಂ ಸರ ಮಾತ್ರ ಇದೆ. 26 ಗ್ರಾಂ ಸರ ಕಳ್ಳನ ಪಾಲಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ತಾಲೂಕಿನಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರಗಳ್ಳರ ಎಡೆಮುರಿ ಕಟ್ಟುವಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಬೇಕಿದೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

9 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago