ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಸರಗಳ್ಳ

ತಡರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತೆಗೆದುಕೊಂಡು ಮನಗೆ ಬರುವ ಸಮಯದಲ್ಲಿ, ಮಹಿಳೆಯನ್ನ ಹಿಂಬಾಲಿಸಿ ಬೈಕ್ ನಲ್ಲಿ ಬಂದ ಸರಗಳ್ಳ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದಾನೆ.

ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ನಿನ್ನೆ ರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತಗೆದುಕೊಂಡು ವಾಪಸ್ ಮನೆಗೆ ಬರುವಾಗ ಮಹಿಳೆಯ ಮಾಂಗಲ್ಯಸರ ಸರಗಳ್ಳನ ಪಾಲಾಗಿದೆ

ನಗರದ ಶಾಂತಿನಗರದ ನಿವಾಸಿ ನಿರ್ಮಲ, ತನ್ನನ್ನೇ ಹಿಂಬಾಲಿಸಿ ಕೊಂಡು ಬರುತ್ತಿರುವ ಬೈಕ್ ಸವಾರರನ್ನ ಗಮನಿಸಿದ ಆಕೆ ಸರವನ್ನ ಜೋಪಾನವಾಗಿ ಹಿಡಿದು ಕೊಂಡಿದ್ದಾರೆ, ರಸ್ತೆಯಲ್ಲಿ ಯಾರು ಇಲ್ಲದನ್ನ ಗಮಿಸಿದ ಆತ ಆಕೆಯ ಮಾಂಗಲ್ಯಸರಕ್ಕೆ ಕೈಹಾಕಿದ್ದಾನೆ.

ಮಹಿಳೆ ತನ್ನ ಸರವನ್ನ ಭದ್ರವಾಗಿ ಹಿಡಿದುಕೊಂಡಿದ್ದರಿಂದ ಮೂಕ್ಕಾಲು ಭಾಗದ ಸರ ಕಳ್ಳನ ಕೈ ಸೇರಿದೆ, ಮಾಂಗಲ್ಯಸರ ಎಗರಸಿ ಸರಗಳ್ಳ ಕ್ಷಣದಲ್ಲೇ ಪರಾರಿಯಾಗಿದ್ದಾನೆ, ಒಟ್ಟು ಒಂದು ಲಕ್ಷದ ಐವತ್ತು ಸಾವಿರ ರೂ. ಮೌಲ್ಯದ 38 ಗ್ರಾಂ ತೂಕದ ಮಾಂಗಲ್ಯಸರವಾಗಿದ್ದು , ನಿರ್ಮಲರ ಬಳಿ ಈಗ 12 ಗ್ರಾಂ ಸರ ಮಾತ್ರ ಇದೆ. 26 ಗ್ರಾಂ ಸರ ಕಳ್ಳನ ಪಾಲಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ತಾಲೂಕಿನಲ್ಲಿ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರಗಳ್ಳರ ಎಡೆಮುರಿ ಕಟ್ಟುವಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಬೇಕಿದೆ.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

4 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

4 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

8 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

20 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

23 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago