ಮಹಿಳೆಯ ಜೊತೆ ಯುವಕನ ಅಕ್ರಮ ಸಂಬಂಧದ ಬಗ್ಗೆ ಸಂಶಯಪಟ್ಟ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಪೊಲೀಸರ ರಕ್ಷಣೆಯಿಂದ ಯುವಕ ಸಾವಿನ ದವಡೆಯಿಂದ ತಪ್ಪಿಸಿಕೊಂಡಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌಚೇನಹಳ್ಳಿಯ 20 ವರ್ಷದ ಯುವಕ ಆಕಾಶ್ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದಾನೆ. ಕಳೆದ ಸೋಮವಾರ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ಗೆ ಬಂದ ಆಕಾಶ್ನನ್ನು 30 ಜನರ ಗುಂಪು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದೆ. ರಾಡು, ದೊಣ್ಣೆ, ಕಲ್ಲು ಮತ್ತು ಮುಳ್ಳಿನ ತಂತಿಯಿಂದ ಮನಸೋಯಿಚ್ಛೆ ಹಲ್ಲೆ ಮಾಡಿದ್ದಾರೆ. ಹೊಲದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಲ್ಲದೆ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಸಕಾಲಕ್ಕೆ ಸ್ಥಳಕ್ಕೆ ಬಂದ ಪೊಲೀಸರು ಆಕಾಶ್ನನ್ನು ರಕ್ಷಣೆ ಮಾಡಿದ್ದಾರೆ.
ಹಲ್ಲೆಗೊಳಗಾದ ಯುವಕ ಆಕಾಶ್ ಮತ್ತು ಮೆಳೆಕೋಟೆ ಕ್ರಾಸ್ನ ನಿವಾಸಿ ಮಾರುತಿ ಡೈವರ್ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಸ್ನೇಹಿತರಾಗಿದ್ದರು. ಗಂಡನ ಯೋಗಕ್ಷೇಮ ವಿಚಾರಿಸಲೆಂದ್ದು ಮಾರುತಿ ಪತ್ನಿ ಆಕಾಶ್ಗೆ ಆಗಾಗ ಫೋನ್ ಕರೆ ಮಾಡುತ್ತಿದ್ದಾರಂತೆ.
ಫೋನ್ ಸಂಭಾಷಣೆಯನ್ನೇ ಸಂಶಯಪಟ್ಟ ಮಾರುತಿ ಮತ್ತು ಆತನ ಸ್ನೇಹಿತರು ಆಕೆ ಜೊತೆ ಮಾತಾಡದಂತೆ ಆರು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. ಕಳೆದ ಸೋಮವಾರ ಮಧ್ಯಾಹ್ನ ಮೊಬೈಲ್ ರಿಪೇರಿಗಾಗಿ ಆಕಾಶ್ ಮೆಳೇಕೋಟೆ ಕ್ರಾಸ್ಗೆ ಹೋಗಿದ್ದ. ಈ ವೇಳೆ ಮಾರುತಿ, ಶ್ರೀನಿವಾಸ್, ಮಂಜುನಾಥ್, ರಘು ಮತ್ತು ನಾಗೇಶ್ ಸೇರಿದಂತೆ 30 ಜನರ ಗುಂಪು ಆಕಾಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಆಕಾಶ್ ಒಬ್ಬ ದಲಿತ ಯುವಕನಾಗಿದ್ದು ಜಾತಿ ನಿಂದನೆ ಸಹ ಮಾಡಿದ್ದಾರೆಂದು ಯುವಕನ ಕಡೆಯವರು ಆರೋಪ ಮಾಡಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…