ಮಹಿಳೆಯ ಜೊತೆ ಯುವಕನ ಅಕ್ರಮ ಸಂಬಂಧದ ಬಗ್ಗೆ ಸಂಶಯಪಟ್ಟ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಪೊಲೀಸರ ರಕ್ಷಣೆಯಿಂದ ಯುವಕ ಸಾವಿನ ದವಡೆಯಿಂದ ತಪ್ಪಿಸಿಕೊಂಡಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌಚೇನಹಳ್ಳಿಯ 20 ವರ್ಷದ ಯುವಕ ಆಕಾಶ್ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದಾನೆ. ಕಳೆದ ಸೋಮವಾರ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ಗೆ ಬಂದ ಆಕಾಶ್ನನ್ನು 30 ಜನರ ಗುಂಪು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದೆ. ರಾಡು, ದೊಣ್ಣೆ, ಕಲ್ಲು ಮತ್ತು ಮುಳ್ಳಿನ ತಂತಿಯಿಂದ ಮನಸೋಯಿಚ್ಛೆ ಹಲ್ಲೆ ಮಾಡಿದ್ದಾರೆ. ಹೊಲದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಲ್ಲದೆ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಸಕಾಲಕ್ಕೆ ಸ್ಥಳಕ್ಕೆ ಬಂದ ಪೊಲೀಸರು ಆಕಾಶ್ನನ್ನು ರಕ್ಷಣೆ ಮಾಡಿದ್ದಾರೆ.
ಹಲ್ಲೆಗೊಳಗಾದ ಯುವಕ ಆಕಾಶ್ ಮತ್ತು ಮೆಳೆಕೋಟೆ ಕ್ರಾಸ್ನ ನಿವಾಸಿ ಮಾರುತಿ ಡೈವರ್ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಸ್ನೇಹಿತರಾಗಿದ್ದರು. ಗಂಡನ ಯೋಗಕ್ಷೇಮ ವಿಚಾರಿಸಲೆಂದ್ದು ಮಾರುತಿ ಪತ್ನಿ ಆಕಾಶ್ಗೆ ಆಗಾಗ ಫೋನ್ ಕರೆ ಮಾಡುತ್ತಿದ್ದಾರಂತೆ.
ಫೋನ್ ಸಂಭಾಷಣೆಯನ್ನೇ ಸಂಶಯಪಟ್ಟ ಮಾರುತಿ ಮತ್ತು ಆತನ ಸ್ನೇಹಿತರು ಆಕೆ ಜೊತೆ ಮಾತಾಡದಂತೆ ಆರು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. ಕಳೆದ ಸೋಮವಾರ ಮಧ್ಯಾಹ್ನ ಮೊಬೈಲ್ ರಿಪೇರಿಗಾಗಿ ಆಕಾಶ್ ಮೆಳೇಕೋಟೆ ಕ್ರಾಸ್ಗೆ ಹೋಗಿದ್ದ. ಈ ವೇಳೆ ಮಾರುತಿ, ಶ್ರೀನಿವಾಸ್, ಮಂಜುನಾಥ್, ರಘು ಮತ್ತು ನಾಗೇಶ್ ಸೇರಿದಂತೆ 30 ಜನರ ಗುಂಪು ಆಕಾಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಆಕಾಶ್ ಒಬ್ಬ ದಲಿತ ಯುವಕನಾಗಿದ್ದು ಜಾತಿ ನಿಂದನೆ ಸಹ ಮಾಡಿದ್ದಾರೆಂದು ಯುವಕನ ಕಡೆಯವರು ಆರೋಪ ಮಾಡಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…