ಮಹಿಳೆ ಜೊತೆ ಯುವಕನ ಅಕ್ರಮ ಸಂಬಂಧ ಬಗ್ಗೆ ಸಂಶಯ; ಯುವಕನ ಮೇಲೆ ಹಲ್ಲೆ

ಮಹಿಳೆಯ ಜೊತೆ ಯುವಕನ ಅಕ್ರಮ ಸಂಬಂಧದ ಬಗ್ಗೆ ಸಂಶಯಪಟ್ಟ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಪೊಲೀಸರ ರಕ್ಷಣೆಯಿಂದ ಯುವಕ ಸಾವಿನ ದವಡೆಯಿಂದ ತಪ್ಪಿಸಿಕೊಂಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌಚೇನಹಳ್ಳಿಯ 20 ವರ್ಷದ ಯುವಕ ಆಕಾಶ್ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದಾನೆ. ಕಳೆದ ಸೋಮವಾರ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್​ಗೆ ಬಂದ ಆಕಾಶ್​ನನ್ನು 30 ಜನರ ಗುಂಪು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದೆ. ರಾಡು, ದೊಣ್ಣೆ, ಕಲ್ಲು ಮತ್ತು ಮುಳ್ಳಿನ ತಂತಿಯಿಂದ ಮನಸೋಯಿಚ್ಛೆ ಹಲ್ಲೆ ಮಾಡಿದ್ದಾರೆ. ಹೊಲದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಲ್ಲದೆ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಸಕಾಲಕ್ಕೆ ಸ್ಥಳಕ್ಕೆ ಬಂದ ಪೊಲೀಸರು ಆಕಾಶ್​ನನ್ನು ರಕ್ಷಣೆ ಮಾಡಿದ್ದಾರೆ.

ಹಲ್ಲೆಗೊಳಗಾದ ಯುವಕ ಆಕಾಶ್ ಮತ್ತು ಮೆಳೆಕೋಟೆ ಕ್ರಾಸ್​ನ ನಿವಾಸಿ ಮಾರುತಿ ಡೈವರ್ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಸ್ನೇಹಿತರಾಗಿದ್ದರು. ಗಂಡನ ಯೋಗಕ್ಷೇಮ ವಿಚಾರಿಸಲೆಂದ್ದು ಮಾರುತಿ ಪತ್ನಿ ಆಕಾಶ್​ಗೆ ಆಗಾಗ ಫೋನ್ ಕರೆ ಮಾಡುತ್ತಿದ್ದಾರಂತೆ.

ಫೋನ್ ಸಂಭಾಷಣೆಯನ್ನೇ ಸಂಶಯಪಟ್ಟ ಮಾರುತಿ ಮತ್ತು ಆತನ ಸ್ನೇಹಿತರು ಆಕೆ ಜೊತೆ ಮಾತಾಡದಂತೆ ಆರು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. ಕಳೆದ ಸೋಮವಾರ ಮಧ್ಯಾಹ್ನ ಮೊಬೈಲ್ ರಿಪೇರಿಗಾಗಿ ಆಕಾಶ್ ಮೆಳೇಕೋಟೆ ಕ್ರಾಸ್​ಗೆ ಹೋಗಿದ್ದ. ಈ ವೇಳೆ ಮಾರುತಿ, ಶ್ರೀನಿವಾಸ್, ಮಂಜುನಾಥ್, ರಘು ಮತ್ತು ನಾಗೇಶ್ ಸೇರಿದಂತೆ 30 ಜನರ ಗುಂಪು ಆಕಾಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಆಕಾಶ್ ಒಬ್ಬ ದಲಿತ ಯುವಕನಾಗಿದ್ದು ಜಾತಿ ನಿಂದನೆ ಸಹ ಮಾಡಿದ್ದಾರೆಂದು ಯುವಕನ ಕಡೆಯವರು ಆರೋಪ ಮಾಡಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

2 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

5 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

9 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

23 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

23 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago