ಮಹಿಳೆ ಜೊತೆ ಯುವಕನ ಅಕ್ರಮ ಸಂಬಂಧ ಬಗ್ಗೆ ಸಂಶಯ; ಯುವಕನ ಮೇಲೆ ಹಲ್ಲೆ

ಮಹಿಳೆಯ ಜೊತೆ ಯುವಕನ ಅಕ್ರಮ ಸಂಬಂಧದ ಬಗ್ಗೆ ಸಂಶಯಪಟ್ಟ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಪೊಲೀಸರ ರಕ್ಷಣೆಯಿಂದ ಯುವಕ ಸಾವಿನ ದವಡೆಯಿಂದ ತಪ್ಪಿಸಿಕೊಂಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌಚೇನಹಳ್ಳಿಯ 20 ವರ್ಷದ ಯುವಕ ಆಕಾಶ್ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದಾನೆ. ಕಳೆದ ಸೋಮವಾರ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್​ಗೆ ಬಂದ ಆಕಾಶ್​ನನ್ನು 30 ಜನರ ಗುಂಪು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದೆ. ರಾಡು, ದೊಣ್ಣೆ, ಕಲ್ಲು ಮತ್ತು ಮುಳ್ಳಿನ ತಂತಿಯಿಂದ ಮನಸೋಯಿಚ್ಛೆ ಹಲ್ಲೆ ಮಾಡಿದ್ದಾರೆ. ಹೊಲದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಲ್ಲದೆ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಸಕಾಲಕ್ಕೆ ಸ್ಥಳಕ್ಕೆ ಬಂದ ಪೊಲೀಸರು ಆಕಾಶ್​ನನ್ನು ರಕ್ಷಣೆ ಮಾಡಿದ್ದಾರೆ.

ಹಲ್ಲೆಗೊಳಗಾದ ಯುವಕ ಆಕಾಶ್ ಮತ್ತು ಮೆಳೆಕೋಟೆ ಕ್ರಾಸ್​ನ ನಿವಾಸಿ ಮಾರುತಿ ಡೈವರ್ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಸ್ನೇಹಿತರಾಗಿದ್ದರು. ಗಂಡನ ಯೋಗಕ್ಷೇಮ ವಿಚಾರಿಸಲೆಂದ್ದು ಮಾರುತಿ ಪತ್ನಿ ಆಕಾಶ್​ಗೆ ಆಗಾಗ ಫೋನ್ ಕರೆ ಮಾಡುತ್ತಿದ್ದಾರಂತೆ.

ಫೋನ್ ಸಂಭಾಷಣೆಯನ್ನೇ ಸಂಶಯಪಟ್ಟ ಮಾರುತಿ ಮತ್ತು ಆತನ ಸ್ನೇಹಿತರು ಆಕೆ ಜೊತೆ ಮಾತಾಡದಂತೆ ಆರು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. ಕಳೆದ ಸೋಮವಾರ ಮಧ್ಯಾಹ್ನ ಮೊಬೈಲ್ ರಿಪೇರಿಗಾಗಿ ಆಕಾಶ್ ಮೆಳೇಕೋಟೆ ಕ್ರಾಸ್​ಗೆ ಹೋಗಿದ್ದ. ಈ ವೇಳೆ ಮಾರುತಿ, ಶ್ರೀನಿವಾಸ್, ಮಂಜುನಾಥ್, ರಘು ಮತ್ತು ನಾಗೇಶ್ ಸೇರಿದಂತೆ 30 ಜನರ ಗುಂಪು ಆಕಾಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಆಕಾಶ್ ಒಬ್ಬ ದಲಿತ ಯುವಕನಾಗಿದ್ದು ಜಾತಿ ನಿಂದನೆ ಸಹ ಮಾಡಿದ್ದಾರೆಂದು ಯುವಕನ ಕಡೆಯವರು ಆರೋಪ ಮಾಡಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

2 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

2 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

3 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

5 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

11 hours ago