ಮಹಿಳೆ ಜೊತೆ ಯುವಕನ ಅಕ್ರಮ ಸಂಬಂಧ ಬಗ್ಗೆ ಸಂಶಯ; ಯುವಕನ ಮೇಲೆ ಹಲ್ಲೆ

ಮಹಿಳೆಯ ಜೊತೆ ಯುವಕನ ಅಕ್ರಮ ಸಂಬಂಧದ ಬಗ್ಗೆ ಸಂಶಯಪಟ್ಟ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಪೊಲೀಸರ ರಕ್ಷಣೆಯಿಂದ ಯುವಕ ಸಾವಿನ ದವಡೆಯಿಂದ ತಪ್ಪಿಸಿಕೊಂಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌಚೇನಹಳ್ಳಿಯ 20 ವರ್ಷದ ಯುವಕ ಆಕಾಶ್ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದಾನೆ. ಕಳೆದ ಸೋಮವಾರ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್​ಗೆ ಬಂದ ಆಕಾಶ್​ನನ್ನು 30 ಜನರ ಗುಂಪು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದೆ. ರಾಡು, ದೊಣ್ಣೆ, ಕಲ್ಲು ಮತ್ತು ಮುಳ್ಳಿನ ತಂತಿಯಿಂದ ಮನಸೋಯಿಚ್ಛೆ ಹಲ್ಲೆ ಮಾಡಿದ್ದಾರೆ. ಹೊಲದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದಲ್ಲದೆ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಸಕಾಲಕ್ಕೆ ಸ್ಥಳಕ್ಕೆ ಬಂದ ಪೊಲೀಸರು ಆಕಾಶ್​ನನ್ನು ರಕ್ಷಣೆ ಮಾಡಿದ್ದಾರೆ.

ಹಲ್ಲೆಗೊಳಗಾದ ಯುವಕ ಆಕಾಶ್ ಮತ್ತು ಮೆಳೆಕೋಟೆ ಕ್ರಾಸ್​ನ ನಿವಾಸಿ ಮಾರುತಿ ಡೈವರ್ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಸ್ನೇಹಿತರಾಗಿದ್ದರು. ಗಂಡನ ಯೋಗಕ್ಷೇಮ ವಿಚಾರಿಸಲೆಂದ್ದು ಮಾರುತಿ ಪತ್ನಿ ಆಕಾಶ್​ಗೆ ಆಗಾಗ ಫೋನ್ ಕರೆ ಮಾಡುತ್ತಿದ್ದಾರಂತೆ.

ಫೋನ್ ಸಂಭಾಷಣೆಯನ್ನೇ ಸಂಶಯಪಟ್ಟ ಮಾರುತಿ ಮತ್ತು ಆತನ ಸ್ನೇಹಿತರು ಆಕೆ ಜೊತೆ ಮಾತಾಡದಂತೆ ಆರು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. ಕಳೆದ ಸೋಮವಾರ ಮಧ್ಯಾಹ್ನ ಮೊಬೈಲ್ ರಿಪೇರಿಗಾಗಿ ಆಕಾಶ್ ಮೆಳೇಕೋಟೆ ಕ್ರಾಸ್​ಗೆ ಹೋಗಿದ್ದ. ಈ ವೇಳೆ ಮಾರುತಿ, ಶ್ರೀನಿವಾಸ್, ಮಂಜುನಾಥ್, ರಘು ಮತ್ತು ನಾಗೇಶ್ ಸೇರಿದಂತೆ 30 ಜನರ ಗುಂಪು ಆಕಾಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಆಕಾಶ್ ಒಬ್ಬ ದಲಿತ ಯುವಕನಾಗಿದ್ದು ಜಾತಿ ನಿಂದನೆ ಸಹ ಮಾಡಿದ್ದಾರೆಂದು ಯುವಕನ ಕಡೆಯವರು ಆರೋಪ ಮಾಡಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

14 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

18 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

19 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago