ದೊಡ್ಡಬಳ್ಳಾಪುರ: ಮನೆ ಮುಂದೆ ಕುಳಿತಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಳ್ಳರು ಕಸಿದು ಪರಾರಿಯಾದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಿವೇಕಾನಂದ ನಗರದಲ್ಲಿ ನಡೆದಿದೆ.
ರತ್ನಮ್ಮ ಎಂಬ ಮಹಿಳೆ ಮಾಂಗಲ್ಯ ಸರ ಕಳೆದುಕೊಂಡವರು. ಮೇ 27ರ ರಾತ್ರಿ ಸುಮಾರು 8:30ರ ವೇಳೆಗೆ ಮನೆ ಮಾಲೀಕರೊಂದಿಗೆ ಮಾತನಾಡುತ್ತಾ ಮನೆ ಬಳಿ ಕುಳಿತಿದ್ದ ವೇಳೆ ಬೈಕಿನಲ್ಲಿ ಇಬ್ಬರು ಖದೀಮರು ಏಕಾಏಕಿ ಬಂದು ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕಳುವಾದ ಮಾಂಗಲ್ಯ ಸರವು ಸುಮಾರು 25 ಗ್ರಾಂ ತೂಕವಿದ್ದು, ಅದರ ಮೌಲ್ಯ ಸುಮಾರು ₹1.30 ಲಕ್ಷ ಎಂದು ಅಂದಾಜಿಸಲಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…