ದೊಡ್ಡಬಳ್ಳಾಪುರ: ಮನೆ ಮುಂದೆ ಕುಳಿತಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಳ್ಳರು ಕಸಿದು ಪರಾರಿಯಾದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಿವೇಕಾನಂದ ನಗರದಲ್ಲಿ ನಡೆದಿದೆ.
ರತ್ನಮ್ಮ ಎಂಬ ಮಹಿಳೆ ಮಾಂಗಲ್ಯ ಸರ ಕಳೆದುಕೊಂಡವರು. ಮೇ 27ರ ರಾತ್ರಿ ಸುಮಾರು 8:30ರ ವೇಳೆಗೆ ಮನೆ ಮಾಲೀಕರೊಂದಿಗೆ ಮಾತನಾಡುತ್ತಾ ಮನೆ ಬಳಿ ಕುಳಿತಿದ್ದ ವೇಳೆ ಬೈಕಿನಲ್ಲಿ ಇಬ್ಬರು ಖದೀಮರು ಏಕಾಏಕಿ ಬಂದು ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕಳುವಾದ ಮಾಂಗಲ್ಯ ಸರವು ಸುಮಾರು 25 ಗ್ರಾಂ ತೂಕವಿದ್ದು, ಅದರ ಮೌಲ್ಯ ಸುಮಾರು ₹1.30 ಲಕ್ಷ ಎಂದು ಅಂದಾಜಿಸಲಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ದೊಡ್ಡಬಳ್ಳಾಪುರ: ಬಕ್ರೀದ್ ಹಬ್ಬದ ಹಿನ್ನೆಲೆ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಹಸುಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರಕ್ಷಣೆ ಮಾಡಿರುವ ಘಟನೆ…
ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಅತಿ ವೇಗವಾಗಿ ಸಂಚರಿಸುವ ವಾಹನಗಳ ಅಟ್ಟಹಾಸಕ್ಕೆ ಅಮಾಯಕರ ಜೀವಗಳು…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿದೆ. ಆ ವ್ಯಕ್ತಿಗೆ…
ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಅವಕಾಶ…
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ…
ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…