ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ-ಮಹಿಳೆ ತೀವ್ರ ವಿರೋಧ, ಕಲ್ಲು-ದೊಣ್ಣೆಗಳಿಂದ ಅಮಾನವೀಯವಾಗಿ ಹಲ್ಲೆ- ದಡಗಟ್ಟುಮಡಗು ಗ್ರಾಮದಲ್ಲಿ ಘಟನೆ

ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯ ದೊಡ್ಡಬಳ್ಳಾಪುರ ತಾಲೂಕಿನ ದಡಘಟ್ಟುಮಡಗು ಗ್ರಾಮದಲ್ಲಿ ನಡೆದಿದೆ. ನವೆಂಬರ್ 20ರಂದು ಮಧ್ಯಾಹ್ನದ ಸಮಯದಲ್ಲಿ ಮಹಿಳೆ ಹೊಲದಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಇದೇ ಗ್ರಾಮದ ನರಸೇಗೌಡ ಎಂಬಾತ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ತೀವ್ರ ವಿರೋಧ ವ್ಯಕ್ತಪಡಿಸಿದಾಗ ಮಹಿಳೆಯನ್ನು ನೆಲಕ್ಕೆ ಬೀಳಿಸಿ ಕಲ್ಲು, ದೊಣ್ಣೆಗಳಿಂದ ಮನುಷ್ಯತ್ವ ಮರೆತು ಹಿಗ್ಗಾಮುಗ್ಗಾವಾಗಿ ಹಲ್ಲೆ ಮಾಡಿದ್ದಾನೆ.

ಮಹಿಳೆ ಚೀರಾಟ ಕೂಗಾಟ ಕೇಳಿ ಸ್ಥಳಕ್ಕೆ ಬಂದ ಆರೋಪಿ ನರಸೇಗೌಡನ ಪತ್ನಿ ಮುತ್ತಮ್ಮ ಕೂಡ ವಿಚಾರವನ್ನು ಅರಿಯದೆ ಮಹಿಳೆ ಮೇಲೆಯೇ ಆಕೆಯೂ ಥಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಬಳಿಕ ಅಪರಿಚಿತ ಬೈಕ್ ಸವಾರರ ಸಹಾಯದೊಂದಿಗೆ ಸಾಸಲು ಗ್ರಾಮಕ್ಕೆ ಆಗಮಿಸಿ ಬಳಿಕ ಆಟೋದಲ್ಲಿ ಪೊಲೀಸ್ ಠಾಣೆಗೆ ಬಂದು ನನಗಾದ ಅನ್ಯಾಯದ ಬಗ್ಗೆ ದೂರು ನೀಡಿದ್ದೇನೆ. ಪೊಲೀಸರು ನಾಲ್ಕು ದಿನಗಳ ಬಳಿಕ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆದರೆ ನನ್ನ ಮೇಲೆ ಅತ್ಯಾಚಾರ ಯತ್ನ, ಕೊಲೆ ಯತ್ನ ಮಾಡಿ ಜೀವಬೆದರಿಕೆ ಹಾಕಿರುವ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಪೊಲೀಸರು ತೆಗೆದುಕೊಂಡಿಲ್ಲ. ಈಗ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ. ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವಭಯದಲ್ಲಿ ಸಂತ್ರಸ್ತ ಮಹಿಳೆ:

ಆರೋಪಿ ನರಸೇಗೌಡನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲು ನಾಲ್ಕು ದಿನ ಸಮಯ ತೆಗೆದುಕೊಂಡಿದ್ದಾರೆ. ಘಟನೆ ನಡೆದ ವೇಳೆಯೂ ನರಸೇಗೌಡ ಜೀವಬೆದರಿಕೆ ಹಾಕಿ ಓಡಿಹೋಗಿದ್ದಾನೆ. ಗ್ರಾಮದಲ್ಲಿ ನಮ್ಮ ಮನೆ ಊರಿನಿಂದ ಒಂದು ಕಿಲೋಮೀಟರ್ ದೂರ ಇದೆ. ಮತ್ತೊಮ್ಮೆ ದಾಳಿ ಮಾಡಿ ಜೀವ ತೆಗೆಯುವುದಕ್ಕೂ ಹಿಂಜರಿಯುವುದಿಲ್ಲ. ಗಂಡ ಮೂರು ವರ್ಷಗಳ ಹಿಂದೆ ಸಾವನ್ನಪ್ಪಿದ್ದಾರೆ, ಚಿಕ್ಕ ಮಗ ಒಂದು ವರ್ಷ ಹಿಂದೆ ಸಾವನ್ನಪ್ಪಿದ್ದಾನೆ. ಈಗ ನನಗೆ ನನ್ನ ಓರ್ವ ದೊಡ್ಡಮಗ ಬಿಟ್ಟರೆ ಯಾರೂ ಇಲ್ಲ ಸೂಕ್ತ ರಕ್ಷಣೆ ಬೇಕೆಂದು ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ದೂರು ದಾಖಲಿಸಿಕೊಳ್ಳಲು ತಡ:

ಸಂತ್ರಸ್ತ ಮಹಿಳೆ ರಕ್ತ ಮಡುವಿನಲ್ಲಿ ಬಂದು ಠಾಣೆಗೆ ದೂರು ನೀಡಿದರೂ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇನ್ನೂ ಅತ್ಯಾಚಾರಕ್ಕೆ ಯತ್ನ ಮತ್ತು ಕೊಲೆಗೆ ಯತ್ನ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರೂ ಪೊಲೀಸರು ಎಫ್‌ಐಆರ್‌ನಲ್ಲಿ ಸೆಕ್ಷೆನ್ 376 ಮತ್ತು 307 ದಾಖಲಿಸಿಕೊಳ್ಳದೆ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ತಹಸೀಲ್ದಾರ್ ಮೋಹನಕುಮಾರಿ ಸಾಂತ್ವನ:

ಘಟನೆಯ ವಿಚಾರ ತಿಳಿದ ತಹಸೀಲ್ದಾರ್ ಮೋಹನಕುಮಾರಿ ರಾತ್ರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಜೊತೆ ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚಿಸಿ, ಆಕೆಗೆ ಮನೋಸ್ಥೆರ್ಯ ತುಂಬಿದರು. ಯಾವುದೇ ಭಯಬೇಡ, ಧೈರ್ಯವಾಗಿರುವ ಎಂದು ಹೇಳಿ ನ್ಯಾಯದೊರಕಿಸಿಕೊಡುವ ಬಗ್ಗೆ ಸಂತ್ರಸ್ತ ಮಹಿಳೆ ತಿಳಿಸಿದರು.

ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್:

ತಹಸೀಲ್ದಾರ್ ಮೋಹನಕುಮಾರಿ ಸೂಚನೆಯಂತೆ ಸಂತ್ರಸ್ತ ಮಹಿಳೆಯನ್ನು ಮಕ್ಕಳ ಮತ್ತು ಕಲ್ಯಾಣಾಭಿವೃದ್ಧಿ ಇಲಾಖಾ ಸಿಬ್ಬಂದಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ದರು. ಆಕೆಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿ ಎಂದು ತಹಸೀಲ್ದಾರ್ ಸೂಚಿಸಿದರು.

ಮಹಿಳೆಯರನ್ನು ಬೆಚ್ಚಿ ಬೀಳಿಸಿದ ಘಟನೆ:

ಮಹಿಳೆ ಮೇಲೆ ಕ್ರೂರಿಯಂತೆ ಹಲ್ಲೆ ಮಾಡಿರುವ ಘಟನೆ ನಾಗರಿಕ ಸಮಾಜವನ್ನೇ ತಲೆತಗ್ಗಿಸುವಂತೆ ಮಾಡಿದೆ. ಪೊಲೀಸರು, ಸಂಬಂಧಪಟ್ಟಂತಹ ಅಧಿಕಾರಿಗಳು ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಮತ್ತೊಮ್ಮೆ ಇಂತಹ ಘಟನೆಗಳಿಗೆ ಆಸ್ಪದ ನೀಡದಂತೆ ಕ್ರಮವಹಿಸಬೇಕಿದೆ.

ತಾಲೂಕಿನ ಸಾಸಲು ಹೋಬಳಿ ದಡಘಟ್ಟುಮಡಗು ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಶೀಘ್ರವಾಗಿ ಬಂಧನ ಮಾಡಿ, ಕಾನೂನು ರೀತಿಯಾಗಿ ಕ್ರಮ ತೆಗೆದುಕೊಳ್ಳಲಾಗುವುದು.
– ನಾಗರಾಜು, ಡಿವೈಎಸ್ಪಿ, ದೊಡ್ಡಬಳ್ಳಾಪುರ ಉಪ ವಿಭಾಗ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

10 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

10 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

10 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

10 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

13 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

16 hours ago