ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ-ಮಹಿಳೆ ತೀವ್ರ ವಿರೋಧ, ಕಲ್ಲು-ದೊಣ್ಣೆಗಳಿಂದ ಅಮಾನವೀಯವಾಗಿ ಹಲ್ಲೆ- ದಡಗಟ್ಟುಮಡಗು ಗ್ರಾಮದಲ್ಲಿ ಘಟನೆ

ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯ ದೊಡ್ಡಬಳ್ಳಾಪುರ ತಾಲೂಕಿನ ದಡಘಟ್ಟುಮಡಗು ಗ್ರಾಮದಲ್ಲಿ ನಡೆದಿದೆ. ನವೆಂಬರ್ 20ರಂದು ಮಧ್ಯಾಹ್ನದ ಸಮಯದಲ್ಲಿ ಮಹಿಳೆ ಹೊಲದಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಇದೇ ಗ್ರಾಮದ ನರಸೇಗೌಡ ಎಂಬಾತ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ತೀವ್ರ ವಿರೋಧ ವ್ಯಕ್ತಪಡಿಸಿದಾಗ ಮಹಿಳೆಯನ್ನು ನೆಲಕ್ಕೆ ಬೀಳಿಸಿ ಕಲ್ಲು, ದೊಣ್ಣೆಗಳಿಂದ ಮನುಷ್ಯತ್ವ ಮರೆತು ಹಿಗ್ಗಾಮುಗ್ಗಾವಾಗಿ ಹಲ್ಲೆ ಮಾಡಿದ್ದಾನೆ.

ಮಹಿಳೆ ಚೀರಾಟ ಕೂಗಾಟ ಕೇಳಿ ಸ್ಥಳಕ್ಕೆ ಬಂದ ಆರೋಪಿ ನರಸೇಗೌಡನ ಪತ್ನಿ ಮುತ್ತಮ್ಮ ಕೂಡ ವಿಚಾರವನ್ನು ಅರಿಯದೆ ಮಹಿಳೆ ಮೇಲೆಯೇ ಆಕೆಯೂ ಥಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಬಳಿಕ ಅಪರಿಚಿತ ಬೈಕ್ ಸವಾರರ ಸಹಾಯದೊಂದಿಗೆ ಸಾಸಲು ಗ್ರಾಮಕ್ಕೆ ಆಗಮಿಸಿ ಬಳಿಕ ಆಟೋದಲ್ಲಿ ಪೊಲೀಸ್ ಠಾಣೆಗೆ ಬಂದು ನನಗಾದ ಅನ್ಯಾಯದ ಬಗ್ಗೆ ದೂರು ನೀಡಿದ್ದೇನೆ. ಪೊಲೀಸರು ನಾಲ್ಕು ದಿನಗಳ ಬಳಿಕ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆದರೆ ನನ್ನ ಮೇಲೆ ಅತ್ಯಾಚಾರ ಯತ್ನ, ಕೊಲೆ ಯತ್ನ ಮಾಡಿ ಜೀವಬೆದರಿಕೆ ಹಾಕಿರುವ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಪೊಲೀಸರು ತೆಗೆದುಕೊಂಡಿಲ್ಲ. ಈಗ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ. ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವಭಯದಲ್ಲಿ ಸಂತ್ರಸ್ತ ಮಹಿಳೆ:

ಆರೋಪಿ ನರಸೇಗೌಡನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲು ನಾಲ್ಕು ದಿನ ಸಮಯ ತೆಗೆದುಕೊಂಡಿದ್ದಾರೆ. ಘಟನೆ ನಡೆದ ವೇಳೆಯೂ ನರಸೇಗೌಡ ಜೀವಬೆದರಿಕೆ ಹಾಕಿ ಓಡಿಹೋಗಿದ್ದಾನೆ. ಗ್ರಾಮದಲ್ಲಿ ನಮ್ಮ ಮನೆ ಊರಿನಿಂದ ಒಂದು ಕಿಲೋಮೀಟರ್ ದೂರ ಇದೆ. ಮತ್ತೊಮ್ಮೆ ದಾಳಿ ಮಾಡಿ ಜೀವ ತೆಗೆಯುವುದಕ್ಕೂ ಹಿಂಜರಿಯುವುದಿಲ್ಲ. ಗಂಡ ಮೂರು ವರ್ಷಗಳ ಹಿಂದೆ ಸಾವನ್ನಪ್ಪಿದ್ದಾರೆ, ಚಿಕ್ಕ ಮಗ ಒಂದು ವರ್ಷ ಹಿಂದೆ ಸಾವನ್ನಪ್ಪಿದ್ದಾನೆ. ಈಗ ನನಗೆ ನನ್ನ ಓರ್ವ ದೊಡ್ಡಮಗ ಬಿಟ್ಟರೆ ಯಾರೂ ಇಲ್ಲ ಸೂಕ್ತ ರಕ್ಷಣೆ ಬೇಕೆಂದು ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ದೂರು ದಾಖಲಿಸಿಕೊಳ್ಳಲು ತಡ:

ಸಂತ್ರಸ್ತ ಮಹಿಳೆ ರಕ್ತ ಮಡುವಿನಲ್ಲಿ ಬಂದು ಠಾಣೆಗೆ ದೂರು ನೀಡಿದರೂ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇನ್ನೂ ಅತ್ಯಾಚಾರಕ್ಕೆ ಯತ್ನ ಮತ್ತು ಕೊಲೆಗೆ ಯತ್ನ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರೂ ಪೊಲೀಸರು ಎಫ್‌ಐಆರ್‌ನಲ್ಲಿ ಸೆಕ್ಷೆನ್ 376 ಮತ್ತು 307 ದಾಖಲಿಸಿಕೊಳ್ಳದೆ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ತಹಸೀಲ್ದಾರ್ ಮೋಹನಕುಮಾರಿ ಸಾಂತ್ವನ:

ಘಟನೆಯ ವಿಚಾರ ತಿಳಿದ ತಹಸೀಲ್ದಾರ್ ಮೋಹನಕುಮಾರಿ ರಾತ್ರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಜೊತೆ ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚಿಸಿ, ಆಕೆಗೆ ಮನೋಸ್ಥೆರ್ಯ ತುಂಬಿದರು. ಯಾವುದೇ ಭಯಬೇಡ, ಧೈರ್ಯವಾಗಿರುವ ಎಂದು ಹೇಳಿ ನ್ಯಾಯದೊರಕಿಸಿಕೊಡುವ ಬಗ್ಗೆ ಸಂತ್ರಸ್ತ ಮಹಿಳೆ ತಿಳಿಸಿದರು.

ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್:

ತಹಸೀಲ್ದಾರ್ ಮೋಹನಕುಮಾರಿ ಸೂಚನೆಯಂತೆ ಸಂತ್ರಸ್ತ ಮಹಿಳೆಯನ್ನು ಮಕ್ಕಳ ಮತ್ತು ಕಲ್ಯಾಣಾಭಿವೃದ್ಧಿ ಇಲಾಖಾ ಸಿಬ್ಬಂದಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ದರು. ಆಕೆಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿ ಎಂದು ತಹಸೀಲ್ದಾರ್ ಸೂಚಿಸಿದರು.

ಮಹಿಳೆಯರನ್ನು ಬೆಚ್ಚಿ ಬೀಳಿಸಿದ ಘಟನೆ:

ಮಹಿಳೆ ಮೇಲೆ ಕ್ರೂರಿಯಂತೆ ಹಲ್ಲೆ ಮಾಡಿರುವ ಘಟನೆ ನಾಗರಿಕ ಸಮಾಜವನ್ನೇ ತಲೆತಗ್ಗಿಸುವಂತೆ ಮಾಡಿದೆ. ಪೊಲೀಸರು, ಸಂಬಂಧಪಟ್ಟಂತಹ ಅಧಿಕಾರಿಗಳು ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಮತ್ತೊಮ್ಮೆ ಇಂತಹ ಘಟನೆಗಳಿಗೆ ಆಸ್ಪದ ನೀಡದಂತೆ ಕ್ರಮವಹಿಸಬೇಕಿದೆ.

ತಾಲೂಕಿನ ಸಾಸಲು ಹೋಬಳಿ ದಡಘಟ್ಟುಮಡಗು ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಶೀಘ್ರವಾಗಿ ಬಂಧನ ಮಾಡಿ, ಕಾನೂನು ರೀತಿಯಾಗಿ ಕ್ರಮ ತೆಗೆದುಕೊಳ್ಳಲಾಗುವುದು.
– ನಾಗರಾಜು, ಡಿವೈಎಸ್ಪಿ, ದೊಡ್ಡಬಳ್ಳಾಪುರ ಉಪ ವಿಭಾಗ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

20 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago