ಮಹಿಳೆ ವಿಚಾರಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಬಂಧನ

ಹೊಟ್ಟೆ ಪಾಡಿಗಾಗಿ ದೂರದ ಪಶ್ಚಿಮ ಬಂಗಾಳದಿಂದ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕಾಗಿ ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿಗೆ ಬಂದಿದ್ದರು. ದಿನನಿತ್ಯ ಕೆಲಸ ಮುಗಿಸಿ ಒಂದೇ ಶೆಡ್ ನಲ್ಲಿ ಮಲಗುತ್ತಿದ್ದರು. ಮಲಗುವ ವೇಳೆ ಸ್ನೇಹಿತ ಆಡಿದ ಆ ಒಂದು ಮಾತಗೆ ಗಲಾಟೆ ಆಗಿದೆ. ಗಲಾಟೆ ಸ್ನೇಹಿತನನ್ನೇ ಬಾರದ ಲೋಕಕ್ಕೆ ಹೋಗುವಂತೆ ಮಾಡಿದೆ.  ಸ್ನೇಹಿತನನ್ನೇ ಕೊಲೆ ಮಾಡಿದ ಆರೋಪಿಗಳು ಈಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಅತಿಥಿಗಳಾಗಿದ್ದಾರೆ.

ಹೌದು, ಪಶ್ಚಿಮ ಬಂಗಾಳ ಮೂಲದ ಸುಶಾಂತ್ ಸಿಂಗ್ ಮತ್ತು ಸಾಧನ್ ಸಿಂಗ್ ಬಂಧಿತ ಆರೋಪಿಗಳು. ಕೂಲಿ ಕೆಲಸಕ್ಕಾಗಿ ಒಂದೇ ಗ್ರಾಮದ ಸ್ನೇಹಿತರು ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ಸೆ.8ರಂದು ಕೆಲಸ ಮುಗಿಸಿ ಮಲಗುವ ವೇಳೆ  ಕೈರ್ ಸಿಂಗ್ (29) ಎಂಬಾತ ಜೊತೆಯಲ್ಲಿ ಜಗಳವಾಗುತ್ತದೆ. ಈ ವೇಳೆ ಶೆಡ್ ನಲ್ಲಿದ್ದ ಸ್ನೇಹಿತರು ಮನಸ್ಸಿಗೆ ಬಂದ ಹಾಗೆ ಹಲ್ಲೆ ಮಾಡುತ್ತಾರೆ. ಜಗಳದ ನಡುವೆ ಚಾಕುವಿನಿಂದ ಕುತ್ತಿಗೆಗೆ ಇರಿಯುತ್ತಾರೆ. ಕುತ್ತಿಗೆ ಹಿರಿದ ಕಾರಣ ಕೈರ್ ಸಿಂಗ್ ಗೆ ಗಂಭೀರ ಗಾಯಗಳಾಗಿದ್ದವು, ಕೂಡಲೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೆ.11ರಂದು ಸಾವನಪ್ಪುತ್ತಾನೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸುತ್ತಾರೆ.

ಆರೋಪಿಗಳು ಕೊಲೆ ಮಾಡಿ ಪಶ್ಚಿಮ ಬಂಗಾಳಕ್ಕೆ ಎಸ್ಕೇಪ್ ಆಗಿರುತ್ತಾರೆ. ಆರೋಪಿಗಳ ಪತ್ತೆಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪಶ್ಚಿಮ ಬಂಗಾಳಕ್ಕೆ ಹೋಗುತ್ತಾರೆ. ಸ್ಥಳೀಯ ಪೊಲೀಸರ ಸಹಾಯದಿಂದ ಆರೋಪಿಗಳ ಮನೆ ಬಳಿ ಹೋದಾಗ ಮಾರಕಾಸ್ತ್ರಗಳನ್ನು ಹಿಡಿದು ಪೊಲೀಸರ ಮುಂದೆ ರಂಪಾಟ ಮಾಡುತ್ತಾರೆ. ಆದರೂ ಕೂಡ ಆರೋಪಿಗಳನ್ನು ವಶಕ್ಕೆ ಪಡೆಯಲು ಇನ್ಸ್‌ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವ ತಂಡ ಯಶಸ್ವಿಯಾಗಿದ್ದಾರೆ‌.

ಕೊಲೆಗೆ ಕಾರಣವಾಗಿದ್ದು ಅಕ್ರಮ ಸಂಬಂಧ. ನೀನು ಮದುವೆ ಆಗಿರುವ ಹುಡುಗಿಯ ಜೊತೆಯಲ್ಲಿ, ನನಗೆ ಮೊದಲು ಸಂಬಂಧವಿತ್ತು. ನಾನು ಅನುಭವಿಸಿದ ಹುಡುಗಿಯನ್ನು ನೀನು ಮದುವೆ ಆಗಿದ್ದೀಯ ಎಂದು ಕೈರ್ ಸಿಂಗ್ ಸ್ನೇಹಿತರ ಮುಂದೆ ಹೇಳಿದಾಗ, ಇಬ್ಬರು ಸ್ನೇಹಿತರು ರೊಚ್ಚಿಗೆದ್ದು, ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಒಟ್ಟಾರೆ, ಕೆಲಸ ಮುಗಿಸಿ ಉಂಡು ಮಲಗುವ ಸಮಯದಲ್ಲಿ ಆಡಿದ ಆ ಒಂದು ಮಾತು, ಒಬ್ಬನನ್ನು ಸ್ಮಶಾನಕ್ಕೆ ಕಳಿಸಿದರು, ಮತ್ತಿಬ್ಬರು ಜೈಲು ಪಾಲಾಗಿದ್ದಾರೆ.  ಆರೋಪಿಗಳನ್ನು ಹಿಡಿಯುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಇನ್ಸ್‌ಪೆಕ್ಟರ್ ಸಾಧಿಕ್ ಪಾಷಾ ಮತ್ತು ತಂಡ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

8 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago