ಮಹಿಳೆ ವಿಚಾರಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಬಂಧನ

ಹೊಟ್ಟೆ ಪಾಡಿಗಾಗಿ ದೂರದ ಪಶ್ಚಿಮ ಬಂಗಾಳದಿಂದ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕಾಗಿ ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿಗೆ ಬಂದಿದ್ದರು. ದಿನನಿತ್ಯ ಕೆಲಸ ಮುಗಿಸಿ ಒಂದೇ ಶೆಡ್ ನಲ್ಲಿ ಮಲಗುತ್ತಿದ್ದರು. ಮಲಗುವ ವೇಳೆ ಸ್ನೇಹಿತ ಆಡಿದ ಆ ಒಂದು ಮಾತಗೆ ಗಲಾಟೆ ಆಗಿದೆ. ಗಲಾಟೆ ಸ್ನೇಹಿತನನ್ನೇ ಬಾರದ ಲೋಕಕ್ಕೆ ಹೋಗುವಂತೆ ಮಾಡಿದೆ.  ಸ್ನೇಹಿತನನ್ನೇ ಕೊಲೆ ಮಾಡಿದ ಆರೋಪಿಗಳು ಈಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಅತಿಥಿಗಳಾಗಿದ್ದಾರೆ.

ಹೌದು, ಪಶ್ಚಿಮ ಬಂಗಾಳ ಮೂಲದ ಸುಶಾಂತ್ ಸಿಂಗ್ ಮತ್ತು ಸಾಧನ್ ಸಿಂಗ್ ಬಂಧಿತ ಆರೋಪಿಗಳು. ಕೂಲಿ ಕೆಲಸಕ್ಕಾಗಿ ಒಂದೇ ಗ್ರಾಮದ ಸ್ನೇಹಿತರು ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ಸೆ.8ರಂದು ಕೆಲಸ ಮುಗಿಸಿ ಮಲಗುವ ವೇಳೆ  ಕೈರ್ ಸಿಂಗ್ (29) ಎಂಬಾತ ಜೊತೆಯಲ್ಲಿ ಜಗಳವಾಗುತ್ತದೆ. ಈ ವೇಳೆ ಶೆಡ್ ನಲ್ಲಿದ್ದ ಸ್ನೇಹಿತರು ಮನಸ್ಸಿಗೆ ಬಂದ ಹಾಗೆ ಹಲ್ಲೆ ಮಾಡುತ್ತಾರೆ. ಜಗಳದ ನಡುವೆ ಚಾಕುವಿನಿಂದ ಕುತ್ತಿಗೆಗೆ ಇರಿಯುತ್ತಾರೆ. ಕುತ್ತಿಗೆ ಹಿರಿದ ಕಾರಣ ಕೈರ್ ಸಿಂಗ್ ಗೆ ಗಂಭೀರ ಗಾಯಗಳಾಗಿದ್ದವು, ಕೂಡಲೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೆ.11ರಂದು ಸಾವನಪ್ಪುತ್ತಾನೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸುತ್ತಾರೆ.

ಆರೋಪಿಗಳು ಕೊಲೆ ಮಾಡಿ ಪಶ್ಚಿಮ ಬಂಗಾಳಕ್ಕೆ ಎಸ್ಕೇಪ್ ಆಗಿರುತ್ತಾರೆ. ಆರೋಪಿಗಳ ಪತ್ತೆಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪಶ್ಚಿಮ ಬಂಗಾಳಕ್ಕೆ ಹೋಗುತ್ತಾರೆ. ಸ್ಥಳೀಯ ಪೊಲೀಸರ ಸಹಾಯದಿಂದ ಆರೋಪಿಗಳ ಮನೆ ಬಳಿ ಹೋದಾಗ ಮಾರಕಾಸ್ತ್ರಗಳನ್ನು ಹಿಡಿದು ಪೊಲೀಸರ ಮುಂದೆ ರಂಪಾಟ ಮಾಡುತ್ತಾರೆ. ಆದರೂ ಕೂಡ ಆರೋಪಿಗಳನ್ನು ವಶಕ್ಕೆ ಪಡೆಯಲು ಇನ್ಸ್‌ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವ ತಂಡ ಯಶಸ್ವಿಯಾಗಿದ್ದಾರೆ‌.

ಕೊಲೆಗೆ ಕಾರಣವಾಗಿದ್ದು ಅಕ್ರಮ ಸಂಬಂಧ. ನೀನು ಮದುವೆ ಆಗಿರುವ ಹುಡುಗಿಯ ಜೊತೆಯಲ್ಲಿ, ನನಗೆ ಮೊದಲು ಸಂಬಂಧವಿತ್ತು. ನಾನು ಅನುಭವಿಸಿದ ಹುಡುಗಿಯನ್ನು ನೀನು ಮದುವೆ ಆಗಿದ್ದೀಯ ಎಂದು ಕೈರ್ ಸಿಂಗ್ ಸ್ನೇಹಿತರ ಮುಂದೆ ಹೇಳಿದಾಗ, ಇಬ್ಬರು ಸ್ನೇಹಿತರು ರೊಚ್ಚಿಗೆದ್ದು, ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಒಟ್ಟಾರೆ, ಕೆಲಸ ಮುಗಿಸಿ ಉಂಡು ಮಲಗುವ ಸಮಯದಲ್ಲಿ ಆಡಿದ ಆ ಒಂದು ಮಾತು, ಒಬ್ಬನನ್ನು ಸ್ಮಶಾನಕ್ಕೆ ಕಳಿಸಿದರು, ಮತ್ತಿಬ್ಬರು ಜೈಲು ಪಾಲಾಗಿದ್ದಾರೆ.  ಆರೋಪಿಗಳನ್ನು ಹಿಡಿಯುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಇನ್ಸ್‌ಪೆಕ್ಟರ್ ಸಾಧಿಕ್ ಪಾಷಾ ಮತ್ತು ತಂಡ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

8 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

16 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago