ಮಹಿಳೆ ವಿಚಾರಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಬಂಧನ

ಹೊಟ್ಟೆ ಪಾಡಿಗಾಗಿ ದೂರದ ಪಶ್ಚಿಮ ಬಂಗಾಳದಿಂದ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕಾಗಿ ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿಗೆ ಬಂದಿದ್ದರು. ದಿನನಿತ್ಯ ಕೆಲಸ ಮುಗಿಸಿ ಒಂದೇ ಶೆಡ್ ನಲ್ಲಿ ಮಲಗುತ್ತಿದ್ದರು. ಮಲಗುವ ವೇಳೆ ಸ್ನೇಹಿತ ಆಡಿದ ಆ ಒಂದು ಮಾತಗೆ ಗಲಾಟೆ ಆಗಿದೆ. ಗಲಾಟೆ ಸ್ನೇಹಿತನನ್ನೇ ಬಾರದ ಲೋಕಕ್ಕೆ ಹೋಗುವಂತೆ ಮಾಡಿದೆ.  ಸ್ನೇಹಿತನನ್ನೇ ಕೊಲೆ ಮಾಡಿದ ಆರೋಪಿಗಳು ಈಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಅತಿಥಿಗಳಾಗಿದ್ದಾರೆ.

ಹೌದು, ಪಶ್ಚಿಮ ಬಂಗಾಳ ಮೂಲದ ಸುಶಾಂತ್ ಸಿಂಗ್ ಮತ್ತು ಸಾಧನ್ ಸಿಂಗ್ ಬಂಧಿತ ಆರೋಪಿಗಳು. ಕೂಲಿ ಕೆಲಸಕ್ಕಾಗಿ ಒಂದೇ ಗ್ರಾಮದ ಸ್ನೇಹಿತರು ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ಸೆ.8ರಂದು ಕೆಲಸ ಮುಗಿಸಿ ಮಲಗುವ ವೇಳೆ  ಕೈರ್ ಸಿಂಗ್ (29) ಎಂಬಾತ ಜೊತೆಯಲ್ಲಿ ಜಗಳವಾಗುತ್ತದೆ. ಈ ವೇಳೆ ಶೆಡ್ ನಲ್ಲಿದ್ದ ಸ್ನೇಹಿತರು ಮನಸ್ಸಿಗೆ ಬಂದ ಹಾಗೆ ಹಲ್ಲೆ ಮಾಡುತ್ತಾರೆ. ಜಗಳದ ನಡುವೆ ಚಾಕುವಿನಿಂದ ಕುತ್ತಿಗೆಗೆ ಇರಿಯುತ್ತಾರೆ. ಕುತ್ತಿಗೆ ಹಿರಿದ ಕಾರಣ ಕೈರ್ ಸಿಂಗ್ ಗೆ ಗಂಭೀರ ಗಾಯಗಳಾಗಿದ್ದವು, ಕೂಡಲೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೆ.11ರಂದು ಸಾವನಪ್ಪುತ್ತಾನೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸುತ್ತಾರೆ.

ಆರೋಪಿಗಳು ಕೊಲೆ ಮಾಡಿ ಪಶ್ಚಿಮ ಬಂಗಾಳಕ್ಕೆ ಎಸ್ಕೇಪ್ ಆಗಿರುತ್ತಾರೆ. ಆರೋಪಿಗಳ ಪತ್ತೆಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪಶ್ಚಿಮ ಬಂಗಾಳಕ್ಕೆ ಹೋಗುತ್ತಾರೆ. ಸ್ಥಳೀಯ ಪೊಲೀಸರ ಸಹಾಯದಿಂದ ಆರೋಪಿಗಳ ಮನೆ ಬಳಿ ಹೋದಾಗ ಮಾರಕಾಸ್ತ್ರಗಳನ್ನು ಹಿಡಿದು ಪೊಲೀಸರ ಮುಂದೆ ರಂಪಾಟ ಮಾಡುತ್ತಾರೆ. ಆದರೂ ಕೂಡ ಆರೋಪಿಗಳನ್ನು ವಶಕ್ಕೆ ಪಡೆಯಲು ಇನ್ಸ್‌ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವ ತಂಡ ಯಶಸ್ವಿಯಾಗಿದ್ದಾರೆ‌.

ಕೊಲೆಗೆ ಕಾರಣವಾಗಿದ್ದು ಅಕ್ರಮ ಸಂಬಂಧ. ನೀನು ಮದುವೆ ಆಗಿರುವ ಹುಡುಗಿಯ ಜೊತೆಯಲ್ಲಿ, ನನಗೆ ಮೊದಲು ಸಂಬಂಧವಿತ್ತು. ನಾನು ಅನುಭವಿಸಿದ ಹುಡುಗಿಯನ್ನು ನೀನು ಮದುವೆ ಆಗಿದ್ದೀಯ ಎಂದು ಕೈರ್ ಸಿಂಗ್ ಸ್ನೇಹಿತರ ಮುಂದೆ ಹೇಳಿದಾಗ, ಇಬ್ಬರು ಸ್ನೇಹಿತರು ರೊಚ್ಚಿಗೆದ್ದು, ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಒಟ್ಟಾರೆ, ಕೆಲಸ ಮುಗಿಸಿ ಉಂಡು ಮಲಗುವ ಸಮಯದಲ್ಲಿ ಆಡಿದ ಆ ಒಂದು ಮಾತು, ಒಬ್ಬನನ್ನು ಸ್ಮಶಾನಕ್ಕೆ ಕಳಿಸಿದರು, ಮತ್ತಿಬ್ಬರು ಜೈಲು ಪಾಲಾಗಿದ್ದಾರೆ.  ಆರೋಪಿಗಳನ್ನು ಹಿಡಿಯುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಇನ್ಸ್‌ಪೆಕ್ಟರ್ ಸಾಧಿಕ್ ಪಾಷಾ ಮತ್ತು ತಂಡ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

3 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

6 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

12 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

23 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago