ಮಹಿಳೆ ವಿಚಾರಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಬಂಧನ

ಹೊಟ್ಟೆ ಪಾಡಿಗಾಗಿ ದೂರದ ಪಶ್ಚಿಮ ಬಂಗಾಳದಿಂದ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕಾಗಿ ಕರ್ನಾಟಕ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿಗೆ ಬಂದಿದ್ದರು. ದಿನನಿತ್ಯ ಕೆಲಸ ಮುಗಿಸಿ ಒಂದೇ ಶೆಡ್ ನಲ್ಲಿ ಮಲಗುತ್ತಿದ್ದರು. ಮಲಗುವ ವೇಳೆ ಸ್ನೇಹಿತ ಆಡಿದ ಆ ಒಂದು ಮಾತಗೆ ಗಲಾಟೆ ಆಗಿದೆ. ಗಲಾಟೆ ಸ್ನೇಹಿತನನ್ನೇ ಬಾರದ ಲೋಕಕ್ಕೆ ಹೋಗುವಂತೆ ಮಾಡಿದೆ.  ಸ್ನೇಹಿತನನ್ನೇ ಕೊಲೆ ಮಾಡಿದ ಆರೋಪಿಗಳು ಈಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಅತಿಥಿಗಳಾಗಿದ್ದಾರೆ.

ಹೌದು, ಪಶ್ಚಿಮ ಬಂಗಾಳ ಮೂಲದ ಸುಶಾಂತ್ ಸಿಂಗ್ ಮತ್ತು ಸಾಧನ್ ಸಿಂಗ್ ಬಂಧಿತ ಆರೋಪಿಗಳು. ಕೂಲಿ ಕೆಲಸಕ್ಕಾಗಿ ಒಂದೇ ಗ್ರಾಮದ ಸ್ನೇಹಿತರು ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ಸೆ.8ರಂದು ಕೆಲಸ ಮುಗಿಸಿ ಮಲಗುವ ವೇಳೆ  ಕೈರ್ ಸಿಂಗ್ (29) ಎಂಬಾತ ಜೊತೆಯಲ್ಲಿ ಜಗಳವಾಗುತ್ತದೆ. ಈ ವೇಳೆ ಶೆಡ್ ನಲ್ಲಿದ್ದ ಸ್ನೇಹಿತರು ಮನಸ್ಸಿಗೆ ಬಂದ ಹಾಗೆ ಹಲ್ಲೆ ಮಾಡುತ್ತಾರೆ. ಜಗಳದ ನಡುವೆ ಚಾಕುವಿನಿಂದ ಕುತ್ತಿಗೆಗೆ ಇರಿಯುತ್ತಾರೆ. ಕುತ್ತಿಗೆ ಹಿರಿದ ಕಾರಣ ಕೈರ್ ಸಿಂಗ್ ಗೆ ಗಂಭೀರ ಗಾಯಗಳಾಗಿದ್ದವು, ಕೂಡಲೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೆ.11ರಂದು ಸಾವನಪ್ಪುತ್ತಾನೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸುತ್ತಾರೆ.

ಆರೋಪಿಗಳು ಕೊಲೆ ಮಾಡಿ ಪಶ್ಚಿಮ ಬಂಗಾಳಕ್ಕೆ ಎಸ್ಕೇಪ್ ಆಗಿರುತ್ತಾರೆ. ಆರೋಪಿಗಳ ಪತ್ತೆಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪಶ್ಚಿಮ ಬಂಗಾಳಕ್ಕೆ ಹೋಗುತ್ತಾರೆ. ಸ್ಥಳೀಯ ಪೊಲೀಸರ ಸಹಾಯದಿಂದ ಆರೋಪಿಗಳ ಮನೆ ಬಳಿ ಹೋದಾಗ ಮಾರಕಾಸ್ತ್ರಗಳನ್ನು ಹಿಡಿದು ಪೊಲೀಸರ ಮುಂದೆ ರಂಪಾಟ ಮಾಡುತ್ತಾರೆ. ಆದರೂ ಕೂಡ ಆರೋಪಿಗಳನ್ನು ವಶಕ್ಕೆ ಪಡೆಯಲು ಇನ್ಸ್‌ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವ ತಂಡ ಯಶಸ್ವಿಯಾಗಿದ್ದಾರೆ‌.

ಕೊಲೆಗೆ ಕಾರಣವಾಗಿದ್ದು ಅಕ್ರಮ ಸಂಬಂಧ. ನೀನು ಮದುವೆ ಆಗಿರುವ ಹುಡುಗಿಯ ಜೊತೆಯಲ್ಲಿ, ನನಗೆ ಮೊದಲು ಸಂಬಂಧವಿತ್ತು. ನಾನು ಅನುಭವಿಸಿದ ಹುಡುಗಿಯನ್ನು ನೀನು ಮದುವೆ ಆಗಿದ್ದೀಯ ಎಂದು ಕೈರ್ ಸಿಂಗ್ ಸ್ನೇಹಿತರ ಮುಂದೆ ಹೇಳಿದಾಗ, ಇಬ್ಬರು ಸ್ನೇಹಿತರು ರೊಚ್ಚಿಗೆದ್ದು, ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಒಟ್ಟಾರೆ, ಕೆಲಸ ಮುಗಿಸಿ ಉಂಡು ಮಲಗುವ ಸಮಯದಲ್ಲಿ ಆಡಿದ ಆ ಒಂದು ಮಾತು, ಒಬ್ಬನನ್ನು ಸ್ಮಶಾನಕ್ಕೆ ಕಳಿಸಿದರು, ಮತ್ತಿಬ್ಬರು ಜೈಲು ಪಾಲಾಗಿದ್ದಾರೆ.  ಆರೋಪಿಗಳನ್ನು ಹಿಡಿಯುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಇನ್ಸ್‌ಪೆಕ್ಟರ್ ಸಾಧಿಕ್ ಪಾಷಾ ಮತ್ತು ತಂಡ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

13 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

23 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

23 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

2 days ago