ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್ ತಿಳಿಸಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ನಾರಿಶಕ್ತಿ ವಂದನ್ ಅಧಿನಿಯಮ ಸಾಕಷ್ಟು ವರ್ಷಗಳಿಂದ ಬಾಕಿಯೇ ಇತ್ತು. ಇದು ಜನಸಂಘದ ಕಾಲದಿಂದಲ್ಲೂ ಮಹಿಳೆಯ ಸಬಲೀಕರಣಕ್ಕೆ ಒತ್ತು ನೀಡಲಾಗಿತ್ತು. ಈಗಾಗಲೇ ಅನೇಕ ವರ್ಷಗಳಿಂದ ಮಹಿಳೆ ಮೀಸಲಾತಿ ತರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಹುನ್ನಾರದಿಂದ ಲೋಕಾಸಭೆಯಲ್ಲಿ ಅಂಗೀಕರಿಸಲು ಸಾಧ್ಯವಾಗುತ್ತಿರಲಿಲ್ಲ. ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಕೆಲಸ ಮಾಡಿಕೊಂಡು ಬರುತ್ತಿದೆ. ಮಹಿಳೆಯರಿಗೆ ಸ್ವಚ್ಚ ಭಾರತ್ ಅಭಿಯಾನ, ಬಯಲು ಶೌಚ ನಿರ್ಮೂಲನೆ, ಜನ್ ಧನ್ ಖಾತೆ, ಮುದ್ರಾ ಯೋಜನೆ, ಬೇಟಿ ಬಚಾವೋ, ಬೇಟಿ ಪಡಾವೋ ಸೇರಿದಂತೆ ನಾನಾ ಯೋಜನೆಗಳನ್ನು ಕೇಂದ್ರ ಸರಕಾರ ನಾರಿಯರಿಗೆ ಅನೇಕ ಸೌಲಭ್ಯಗಳನ್ನು ಕೇಂದ್ರ ಸರಕಾರ ನೀಡಿದೆ ಎಂದರು.
ಮಾತೃ ವಂದನಾ , ಮಾತೃ ಪೋಷಣ್ ಯೋಜನೆಗಳ ಮೂಲಕ ಪೌಷ್ಟಿಕ ಆಹಾರವನ್ನು ನೀಡಿದ್ದಾರೆ. ಆರ್ಥಿಕ, ಆರೋಗ್ಯ ಕ್ಷೇತ್ರಗಳಲ್ಲೂ ಮಹಿಳೆಯರನ್ನು ಸಬಲೀಕರಣ ಮಾಡಲು ಕೆಲಸ ಮಾಡಿದರು. ದೇಶದಲ್ಲಿ ಹೆಚ್ಚಿನ ಮತದಾನವನ್ನು ಮಹಿಳೆಯರು ಮಾಡುತ್ತಿದ್ದಾರೆ. ಮಹಿಳೆಯರು ಕೇವಲ ಫಲಾನುಭವಿಗಳಾಗಬಾರದು, ಯೋಜನೆಗಳನ್ನು ರೂಪಿಸುವ ಸ್ಥಾನಕ್ಕೆ ಮಹಿಳೆಯರು ಬರಬೇಕು. ವಿಕಸಿತ ಭಾರತ ಸಂಕಲ್ಪದೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದರು.
ಈ ವೇಳೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ಆನಂದ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಮ್ಮ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನು ರೆಡ್ಡಿ ಸೇರಿದಂತೆ ವಿವಿಧ ತಾಲೂಕುಗಳ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಜರಿದ್ದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…