ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್ ತಿಳಿಸಿದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ನಾರಿಶಕ್ತಿ ವಂದನ್ ಅಧಿನಿಯಮ ಸಾಕಷ್ಟು ವರ್ಷಗಳಿಂದ ಬಾಕಿಯೇ ಇತ್ತು. ಇದು ಜನಸಂಘದ ಕಾಲದಿಂದಲ್ಲೂ ಮಹಿಳೆಯ ಸಬಲೀಕರಣಕ್ಕೆ ಒತ್ತು ನೀಡಲಾಗಿತ್ತು. ಈಗಾಗಲೇ ಅನೇಕ ವರ್ಷಗಳಿಂದ ಮಹಿಳೆ ಮೀಸಲಾತಿ ತರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಹುನ್ನಾರದಿಂದ ಲೋಕಾಸಭೆಯಲ್ಲಿ ಅಂಗೀಕರಿಸಲು ಸಾಧ್ಯವಾಗುತ್ತಿರಲಿಲ್ಲ. ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಕೆಲಸ ಮಾಡಿಕೊಂಡು ಬರುತ್ತಿದೆ. ಮಹಿಳೆಯರಿಗೆ ಸ್ವಚ್ಚ ಭಾರತ್ ಅಭಿಯಾನ, ಬಯಲು ಶೌಚ ನಿರ್ಮೂಲನೆ, ಜನ್ ಧನ್ ಖಾತೆ, ಮುದ್ರಾ ಯೋಜನೆ, ಬೇಟಿ ಬಚಾವೋ, ಬೇಟಿ ಪಡಾವೋ ಸೇರಿದಂತೆ ನಾನಾ ಯೋಜನೆಗಳನ್ನು ಕೇಂದ್ರ ಸರಕಾರ ನಾರಿಯರಿಗೆ ಅನೇಕ ಸೌಲಭ್ಯಗಳನ್ನು ಕೇಂದ್ರ ಸರಕಾರ ನೀಡಿದೆ ಎಂದರು.

ಮಾತೃ ವಂದನಾ , ಮಾತೃ ಪೋಷಣ್ ಯೋಜನೆಗಳ ಮೂಲಕ ಪೌಷ್ಟಿಕ ಆಹಾರವನ್ನು ನೀಡಿದ್ದಾರೆ. ಆರ್ಥಿಕ, ಆರೋಗ್ಯ ಕ್ಷೇತ್ರಗಳಲ್ಲೂ ಮಹಿಳೆಯರನ್ನು ಸಬಲೀಕರಣ ಮಾಡಲು ಕೆಲಸ ಮಾಡಿದರು. ದೇಶದಲ್ಲಿ ಹೆಚ್ಚಿನ ಮತದಾನವನ್ನು ಮಹಿಳೆಯರು ಮಾಡುತ್ತಿದ್ದಾರೆ. ಮಹಿಳೆಯರು ಕೇವಲ ಫಲಾನುಭವಿಗಳಾಗಬಾರದು, ಯೋಜನೆಗಳನ್ನು ರೂಪಿಸುವ ಸ್ಥಾನಕ್ಕೆ ಮಹಿಳೆಯರು ಬರಬೇಕು. ವಿಕಸಿತ ಭಾರತ ಸಂಕಲ್ಪದೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದರು.

ಈ ವೇಳೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ಆನಂದ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಮ್ಮ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನು ರೆಡ್ಡಿ ಸೇರಿದಂತೆ ವಿವಿಧ ತಾಲೂಕುಗಳ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಜರಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

15 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago